ಬೆಂಗಳೂರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI), ರೆಪೊ ರೇಟ್ 25 ಬೇಸಿಸ್ ಇಳಿಸುವ ಮೂಲಕ ಆರ್ಥಿಕ ಬೆಳವಣಿಗೆಯ ಪುನರುಜ್ಜೀವನಕ್ಕೆ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (FKCCI) ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ಹಣದುಬ್ಬರ, ಒಟ್ಟು ರಾಷ್ಟ್ರೀಯ ಉತ್ಪನ್ನದ (GDP) ಸಂಕಷ್ಟದಿಂದ ದೇಶದ ಆರ್ಥಿಕತೆ ಕುಸಿಯುವ ಸಮಯದಲ್ಲಿ ರೆಪೊ ದರ ಕಡಿಮೆ ಮಾಡಿರುವ ಆರ್ಬಿಐನ ನಿರ್ಧಾರ ತುಂಬಾ ಸೂಕ್ತವಾಗಿದೆ ಎಂದು ತಿಳಿಸಿದರು.
ರೆಪೊ ದರ ಕಡಿಮೆಯಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಬಡ್ಡಿದರದಿಂದ ನರಳುತ್ತಿರುವ ಎಂಎಸ್ಎಂಇಗಳು, ಉತ್ಪಾದನೆ, ರಿಯಲ್ ಎಸ್ಟೇಟ್ ಮತ್ತು ಕೈಗಾರಿಕೆಗಳು ಇದರ ಪ್ರಯೋಜನ ಪಡೆಯಲಿವೆ. ಇದು ಭಾರತದ ಆರ್ಥಿಕ ಬೆಳವಣಿಗೆಯ ಪಥವನ್ನು ಬಲಪಡಿಸುತ್ತದೆ ಎಂದು ಹೇಳಿದರು.
ಅಲ್ಲದೇ, ದೇಶಿಯ ಉದ್ಯಮಗಳಿಗೆ ಬೆಂಬಲ ನೀಡುವುದಲ್ಲದೇ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುತ್ತದೆ. ಕರ್ನಾಟಕ ಮತ್ತು ಭಾರತವನ್ನು ವ್ಯಾಪಾರ ವಿಸ್ತರಣೆಗೆ ಆಕರ್ಷಕ ತಾಣವನ್ನಾಗಿ ಮಾಡುತ್ತದೆ. ಈ ದರ ಕಡಿತದ ಪ್ರಯೋಜನಗಳನ್ನು ಗ್ರಾಹಕರಿಗೆ ತ್ವರಿತವಾಗಿ ವರ್ಗಾಯಿಸುವಂತೆ FKCCI ಒತ್ತಾಯಿಸುತ್ತದೆ ಎಂದು ಎಂ.ಜಿ.ಬಾಲಕೃಷ್ಣ ಹೇಳಿದರು.
ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…