ರಾಜ್ಯ

ರೆಪೊ ದರ ಕಡಿಮೆ| ಆರ್ಥಿಕ ಬೆಳವಣಿಗೆಗೆ ಉತ್ತೇಜನ: ಎಂಜಿ ಬಾಲಕೃಷ್ಣ

ಬೆಂಗಳೂರು: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (RBI), ರೆಪೊ ರೇಟ್‌ 25 ಬೇಸಿಸ್‌ ಇಳಿಸುವ ಮೂಲಕ ಆರ್ಥಿಕ ಬೆಳವಣಿಗೆಯ ಪುನರುಜ್ಜೀವನಕ್ಕೆ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (FKCCI) ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ಹಣದುಬ್ಬರ, ಒಟ್ಟು ರಾಷ್ಟ್ರೀಯ ಉತ್ಪನ್ನದ (GDP) ಸಂಕಷ್ಟದಿಂದ ದೇಶದ ಆರ್ಥಿಕತೆ ಕುಸಿಯುವ ಸಮಯದಲ್ಲಿ ರೆಪೊ ದರ ಕಡಿಮೆ ಮಾಡಿರುವ ಆರ್‌ಬಿಐನ ನಿರ್ಧಾರ ತುಂಬಾ ಸೂಕ್ತವಾಗಿದೆ ಎಂದು ತಿಳಿಸಿದರು.

ರೆಪೊ ದರ ಕಡಿಮೆಯಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಬಡ್ಡಿದರದಿಂದ ನರಳುತ್ತಿರುವ ಎಂಎಸ್‌ಎಂಇಗಳು, ಉತ್ಪಾದನೆ, ರಿಯಲ್‌ ಎಸ್ಟೇಟ್‌ ಮತ್ತು ಕೈಗಾರಿಕೆಗಳು ಇದರ ಪ್ರಯೋಜನ ಪಡೆಯಲಿವೆ. ಇದು ಭಾರತದ ಆರ್ಥಿಕ ಬೆಳವಣಿಗೆಯ ಪಥವನ್ನು ಬಲಪಡಿಸುತ್ತದೆ ಎಂದು ಹೇಳಿದರು.

ಅಲ್ಲದೇ, ದೇಶಿಯ ಉದ್ಯಮಗಳಿಗೆ ಬೆಂಬಲ ನೀಡುವುದಲ್ಲದೇ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುತ್ತದೆ. ಕರ್ನಾಟಕ ಮತ್ತು ಭಾರತವನ್ನು ವ್ಯಾಪಾರ ವಿಸ್ತರಣೆಗೆ ಆಕರ್ಷಕ ತಾಣವನ್ನಾಗಿ ಮಾಡುತ್ತದೆ. ಈ ದರ ಕಡಿತದ ಪ್ರಯೋಜನಗಳನ್ನು ಗ್ರಾಹಕರಿಗೆ ತ್ವರಿತವಾಗಿ ವರ್ಗಾಯಿಸುವಂತೆ FKCCI ಒತ್ತಾಯಿಸುತ್ತದೆ ಎಂದು ಎಂ.ಜಿ.ಬಾಲಕೃಷ್ಣ ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

6 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

9 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago