ರಾಜ್ಯ

ರೆಪೊ ದರ ಕಡಿಮೆ| ಆರ್ಥಿಕ ಬೆಳವಣಿಗೆಗೆ ಉತ್ತೇಜನ: ಎಂಜಿ ಬಾಲಕೃಷ್ಣ

ಬೆಂಗಳೂರು: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (RBI), ರೆಪೊ ರೇಟ್‌ 25 ಬೇಸಿಸ್‌ ಇಳಿಸುವ ಮೂಲಕ ಆರ್ಥಿಕ ಬೆಳವಣಿಗೆಯ ಪುನರುಜ್ಜೀವನಕ್ಕೆ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (FKCCI) ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ಹಣದುಬ್ಬರ, ಒಟ್ಟು ರಾಷ್ಟ್ರೀಯ ಉತ್ಪನ್ನದ (GDP) ಸಂಕಷ್ಟದಿಂದ ದೇಶದ ಆರ್ಥಿಕತೆ ಕುಸಿಯುವ ಸಮಯದಲ್ಲಿ ರೆಪೊ ದರ ಕಡಿಮೆ ಮಾಡಿರುವ ಆರ್‌ಬಿಐನ ನಿರ್ಧಾರ ತುಂಬಾ ಸೂಕ್ತವಾಗಿದೆ ಎಂದು ತಿಳಿಸಿದರು.

ರೆಪೊ ದರ ಕಡಿಮೆಯಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಬಡ್ಡಿದರದಿಂದ ನರಳುತ್ತಿರುವ ಎಂಎಸ್‌ಎಂಇಗಳು, ಉತ್ಪಾದನೆ, ರಿಯಲ್‌ ಎಸ್ಟೇಟ್‌ ಮತ್ತು ಕೈಗಾರಿಕೆಗಳು ಇದರ ಪ್ರಯೋಜನ ಪಡೆಯಲಿವೆ. ಇದು ಭಾರತದ ಆರ್ಥಿಕ ಬೆಳವಣಿಗೆಯ ಪಥವನ್ನು ಬಲಪಡಿಸುತ್ತದೆ ಎಂದು ಹೇಳಿದರು.

ಅಲ್ಲದೇ, ದೇಶಿಯ ಉದ್ಯಮಗಳಿಗೆ ಬೆಂಬಲ ನೀಡುವುದಲ್ಲದೇ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುತ್ತದೆ. ಕರ್ನಾಟಕ ಮತ್ತು ಭಾರತವನ್ನು ವ್ಯಾಪಾರ ವಿಸ್ತರಣೆಗೆ ಆಕರ್ಷಕ ತಾಣವನ್ನಾಗಿ ಮಾಡುತ್ತದೆ. ಈ ದರ ಕಡಿತದ ಪ್ರಯೋಜನಗಳನ್ನು ಗ್ರಾಹಕರಿಗೆ ತ್ವರಿತವಾಗಿ ವರ್ಗಾಯಿಸುವಂತೆ FKCCI ಒತ್ತಾಯಿಸುತ್ತದೆ ಎಂದು ಎಂ.ಜಿ.ಬಾಲಕೃಷ್ಣ ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago