ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪೂರ್ಣ ಭಾಷಣವನ್ನು ಓದಿದರು.
ಕಳೆದ ವಾರ ವಿಧಾನಮಂಡಲ ಅಧಿವೇಶನದ ವೇಳೆ ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ರಾಜ್ಯಪಾಲರು ಕೇವಲ ಮೊದಲ ಮತ್ತು ಕೊನೆಯ ಸಾಲುಗಳನ್ನು ಓದಿ ನಿರ್ಗಮಿಸಿದ್ದರು. ಇದು ವಿವಾದ ಕೂಡ ಸೃಷ್ಟಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ, ವಿಧಾನಮಂಡಲ ಜಂಟಿ ಅಧಿವೇಶನದ ಸಂದರ್ಭದಲ್ಲಿ ಉಂಟಾದ ವಿವಾದದ ನಂತರ ಗಣರಾಜ್ಯೋತ್ಸವ ಭಾಷಣಕ್ಕೆ ಸಂಬಂಧಿಸಿದಂತೆ ಎಲ್ಲರ ಗಮನ ಕೇಂದ್ರೀಕೃತವಾಗಿತ್ತು.
ಆದರೆ, ಈ ಬಾರಿ ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಪೂರ್ಣವಾಗಿ ಓದಿದರು. ಭಾಷಣದಲ್ಲಿ ಸಂವಿಧಾನದ ಮಹತ್ವ, ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ಆರ್ಥಿಕ ಬೆಳವಣಿಗೆ, ಜನರ ಏಳಿಗೆಗೆ ಸರ್ಕಾರದ ಬದ್ಧತೆ ಮತ್ತು ರಾಷ್ಟ್ರೀಯ ಏಕತೆಯನ್ನು ಒತ್ತಿ ಹೇಳಲಾಗಿದೆ ಎಂದು ತಿಳಿದುಬಂದಿದೆ.
ಇದು ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಇತ್ತೀಚಿನ ಉದ್ವಿಗ್ನತೆಯ ನಂತರದ ಸಕಾರಾತ್ಮಕ ಬೆಳವಣಿಗೆಯಾಗಿ ಕಂಡುಬಂದಿದೆ. ರಾಜ್ಯಪಾಲರು ಭಾಷಣದಲ್ಲಿ “ಜೈ ಹಿಂದ್, ಜೈ ಕರ್ನಾಟಕ” ಎಂದು ಕೊನೆಗೊಳಿಸಿದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…