ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪೂರ್ಣ ಭಾಷಣವನ್ನು ಓದಿದರು.
ಕಳೆದ ವಾರ ವಿಧಾನಮಂಡಲ ಅಧಿವೇಶನದ ವೇಳೆ ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ರಾಜ್ಯಪಾಲರು ಕೇವಲ ಮೊದಲ ಮತ್ತು ಕೊನೆಯ ಸಾಲುಗಳನ್ನು ಓದಿ ನಿರ್ಗಮಿಸಿದ್ದರು. ಇದು ವಿವಾದ ಕೂಡ ಸೃಷ್ಟಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ, ವಿಧಾನಮಂಡಲ ಜಂಟಿ ಅಧಿವೇಶನದ ಸಂದರ್ಭದಲ್ಲಿ ಉಂಟಾದ ವಿವಾದದ ನಂತರ ಗಣರಾಜ್ಯೋತ್ಸವ ಭಾಷಣಕ್ಕೆ ಸಂಬಂಧಿಸಿದಂತೆ ಎಲ್ಲರ ಗಮನ ಕೇಂದ್ರೀಕೃತವಾಗಿತ್ತು.
ಆದರೆ, ಈ ಬಾರಿ ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಪೂರ್ಣವಾಗಿ ಓದಿದರು. ಭಾಷಣದಲ್ಲಿ ಸಂವಿಧಾನದ ಮಹತ್ವ, ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ಆರ್ಥಿಕ ಬೆಳವಣಿಗೆ, ಜನರ ಏಳಿಗೆಗೆ ಸರ್ಕಾರದ ಬದ್ಧತೆ ಮತ್ತು ರಾಷ್ಟ್ರೀಯ ಏಕತೆಯನ್ನು ಒತ್ತಿ ಹೇಳಲಾಗಿದೆ ಎಂದು ತಿಳಿದುಬಂದಿದೆ.
ಇದು ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಇತ್ತೀಚಿನ ಉದ್ವಿಗ್ನತೆಯ ನಂತರದ ಸಕಾರಾತ್ಮಕ ಬೆಳವಣಿಗೆಯಾಗಿ ಕಂಡುಬಂದಿದೆ. ರಾಜ್ಯಪಾಲರು ಭಾಷಣದಲ್ಲಿ “ಜೈ ಹಿಂದ್, ಜೈ ಕರ್ನಾಟಕ” ಎಂದು ಕೊನೆಗೊಳಿಸಿದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…