ರಾಜ್ಯ

ತಿರುಪತಿ, ಶ್ರೀಶೈಲದಲ್ಲಿ ಕನ್ನಡಿಗರ ಸೌಲಭ್ಯಕ್ಕೆ ಮನವಿ

ಬೆಂಗಳೂರು: ಆಂಧ್ರಪ್ರದೇಶದ ತಿರುಪತಿ ಮತ್ತು ಶ್ರೀಶೈಲಕ್ಕೆ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೋಗುತ್ತಾರೆ. ಅವರಿಗೆ ವಸತಿ ಸೇರಿದಂತೆ ಇತರ ಮೂಲಸೌಕರ್ಯ ಒದಗಿಸಲು ಭೂಮಿ ಮತ್ತಿತರೆ ಸೌಲಭ್ಯಕ್ಕಾಗಿ ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ನಡೆದ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಆಂಧ್ರ ಮತ್ತು ರಾಜ್ಯದ ಅರಣ್ಯಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕಕ್ಕೂ ಆಂಧ್ರಪ್ರದೇಶಕ್ಕೂ ಮೊದಲಿನಿಂದಲೂ ಅವಿನಾಭಾವ ಸಂಬಂಧವಿದೆ. ಪಂಚ ದ್ರಾವಿಡ ಭಾಷೆಗಳಲ್ಲಿ ಕನ್ನಡ ಮತ್ತು ತೆಲುಗು ಎರಡೂ ಭಾಷೆ ಸೇರುತ್ತವೆ. ನಮ್ಮ ಭಾಷೆ ಬೇರೆ ಆದರೂ ಭಾವನೆಗಳು ಒಂದೇ ಆಗಿದೆ. ಎರಡೂ ಭಾಷೆಯ ಲಿಪಿಗಳ ನಡುವೆ ಸಾಮ್ಯತೆ ಇದೆ. ಎರಡೂ ರಾಜ್ಯಗಳ ಜನರ ನಡುವೆ ಸಮನ್ವಯತೆ, ಸೋದರತ್ವ ಇದೆ ಎಂದರು.

ನನ್ನ ತವರು ಜಿಲ್ಲೆ ಬೀದರ್ ಗಡಿಯಲ್ಲೇ ಅವಿಭಜಿತ ಆಂಧ್ರಪ್ರದೇಶ ಇತ್ತು. ಈಗ ತೆಲಂಗಾಣ ಆಗಿದೆ. ಕಲ್ಯಾಣ ಕರ್ನಾಟಕ ಭಾಗದ ನಮಗೆ ಹೈದ್ರಾಬಾದ್ ಹತ್ತಿರದಲ್ಲೇ ಇದೆ. ಹೈದ್ರಾಬಾದ್ ನಲ್ಲಿ ನಮ್ಮ ಭಾಗದ ಹಲವರು ಉದ್ಯೋಗ – ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಎರಡೂ ರಾಜ್ಯಗಳ ಜೊತೆ ವೈವಾಹಿಕ ಸಂಬಂಧಗಳೂ ಇವೆ. ಇದು ಶತ ಶತಮಾನಗಳಿಂದ ನಡೆಯುತ್ತಿದ್ದು. ಆಂಧ್ರ ಮತ್ತು ಕರ್ನಾಟಕದ ನಡುವೆ ಅವಿನಾಭಾವ ಸಂಬಂಧ ಇದೆ ಎಂದರು.

ನಮ್ಮ ಎರಡೂ ರಾಜ್ಯಗಳ ನಡುವೆ ಬಾಂಧವ್ಯ ಇರಬೇಕು. ನಾವು ಹೊರ ರಾಷ್ಟ್ರಗಳಿಂದ ಕೂಡ ನಮ್ಮ ಮೃಗಾಲಯಗಳಿಗೆ ಪ್ರಾಣಿಗಳನ್ನು ತರಿಸಿಕೊಳ್ಳುತ್ತೇವೆ. ನಮ್ಮಲ್ಲಿ ಹೆಚ್ಚಾಗಿರುವ ಪ್ರಾಣಿಗಳನ್ನು ಇತರ ರಾಷ್ಟ್ರಗಳಿಗೂ ನೀಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

37 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

51 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

52 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

54 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

56 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

1 hour ago