ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ರವರಿಗೆ ಮರಣೋತ್ತರ ಕರ್ನಾಟಕ ರತ್ನ ಘೋಷಣೆ ಹಿನ್ನೆಲೆಯಲ್ಲೇ ನಟ ಹಾಗೂ ರಾಜಕಾರಣಿ ರೆಬಲ್ಸ್ಟಾರ್ ಅಂಬರೀಶ್ರವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಹಿರಿಯ ನಟಿ ತಾರಾ ಅನುರಾಧ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರಿಗೆ ಮನವಿ ಸಲ್ಲಿಸಿದ್ದಾರೆ.
ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸದಲ್ಲಿ ಭೇಟಿ ಮಾಡಿ, ಮನವಿ ಸಲ್ಲಿಸಿದ ಅವರು, ಅಂಬರೀಶ್ರವರೂ ಕೂಡ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು, ಮನೋಜ್ಞ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಅಂಬರೀಶ್ರವರನ್ನು ನೀವೂ ಸಹ ಹತ್ತಿರದಿಂದ ಬಲ್ಲವರಾಗಿದ್ದು, ಆತ್ಮೀಯರಾಗಿದ್ದರು.
ಡಾ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾ ದೇವಿಯವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಕನ್ನಡ ಚಿತ್ರರಂಗಕ್ಕೆ ಸಂತಸದ ವಿಷಯ. ಅದೇ ರೀತಿ ಮಂಡ್ಯದ ಗಂಡು ಅಂಬರೀಶ್ ಅವರಿಗೂ ಕೂಡ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುವಂತೆ ಅಭಿಮಾನಿಗಳ ಪರವಾಗಿ ಕೋರಿದರು.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…