ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ, 2024 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.
ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ ಕಾರಣಕ್ಕೆ ಸಹಕಾರ ಇಲಾಖೆಯ ನೇಮಕಾತಿಗಳಲ್ಲಿ ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವಿ, ಡಿಪ್ಲಮೋ ಪಡೆದವರಿಗೆ ಮೀಸಲಾತಿ ನೀಡುವ ಪರವಾಗಿದ್ದೀನಿ ಎಂದರು.
ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ/ ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು ಎಂದು ಕರೆ ನೀಡಿದರು.
ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ಹಾಲು ಉತ್ಪಾದಕರಿಗೆ ಅನುಕೂಲ ಆಗುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹ ಧನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…