Categories: ರಾಜ್ಯ

ಸಹಕಾರ ಪದವೀಧರರಿಗೆ ಮೀಸಲಾತಿ: ಸಿಎಂ ಭರವಸೆ

ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ‌ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ, 2024 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ ಕಾರಣಕ್ಕೆ ಸಹಕಾರ ಇಲಾಖೆಯ ನೇಮಕಾತಿಗಳಲ್ಲಿ ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವಿ, ಡಿಪ್ಲಮೋ ಪಡೆದವರಿಗೆ ಮೀಸಲಾತಿ ನೀಡುವ ಪರವಾಗಿದ್ದೀನಿ ಎಂದರು.

ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ/ ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು ಎಂದು ಕರೆ ನೀಡಿದರು.

ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ ಎಂದು ತಿಳಿಸಿದರು.

ಹಾಲು ಉತ್ಪಾದಕರಿಗೆ ಅನುಕೂಲ ಆಗುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹ ಧನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

10 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

10 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

11 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

12 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

12 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

13 hours ago