ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ, 2024 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.
ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ ಕಾರಣಕ್ಕೆ ಸಹಕಾರ ಇಲಾಖೆಯ ನೇಮಕಾತಿಗಳಲ್ಲಿ ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವಿ, ಡಿಪ್ಲಮೋ ಪಡೆದವರಿಗೆ ಮೀಸಲಾತಿ ನೀಡುವ ಪರವಾಗಿದ್ದೀನಿ ಎಂದರು.
ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ/ ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು ಎಂದು ಕರೆ ನೀಡಿದರು.
ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ಹಾಲು ಉತ್ಪಾದಕರಿಗೆ ಅನುಕೂಲ ಆಗುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹ ಧನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…