ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಅಂದರೆ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ನಿನ್ನೆ(ಜು.16) ನಡೆದ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದರೆ, ಇದಕ್ಕೆ ಉದ್ಯಮಿ ಮೋಹನ್ ದಾಸ್ ಪೈ ಸೇರಿದಂತೆ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮಸೂದೆ ವಿಚಾರವಾಗಿ ಟ್ವೀಟ್ ಮಾಡಿರುವ ಉದ್ಯಮಿ ಮೋಹನ್ ದಾಸ್ ಪೈ, ಮಸೂದೆಯನ್ನು ಜಾರಿಗೆ ತರಬಾರದು. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.
ಮುಂದುವರೆದು, ಖಾಸಗಿ ಕಂಪನಿಗಳಿಗೆ ನೇಮಕ ಮಾಡಿಕೊಳ್ಳುವಾಗ ಸರ್ಕಾರಿ ಅಧಿಕಾರಿಗಳು ಸಂದರ್ಶನಕ್ಕೆ ಬರುತ್ತಾರಾ? ಸಂದರ್ಶನ ಸಮಯದಲ್ಲಿ ಅವರ ಭಾಷೆಯನ್ನು ಪರೀಕ್ಷಿಸಿ ನೇಮಕ ಮಾಡಿಕೊಳ್ಳಬೇಕಾ? ಕಾಂಗ್ರಸ್ ಸರ್ಕಾರ ಇಂತಹ ಮಸೂದೆ ಜಾರಿ ಮಾಡಲು ಮುಂದಾಗಿರುವುದು ನಂಬಲು ಅಸಾಧ್ಯ ಎಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಈ ಬಗ್ಗೆ ʼಟೆಕ್ ಹಬ್ ಆಗಿ ನುರಿತ ಪ್ರತಿಭೆಗಳ ಅಗತ್ಯವಿದೆ. ಸ್ಥಳೀಯರಿಗೆ ಉದ್ಯೋಗಗಳನ್ನು ಒದಗಿಸುವ ಗುರಿಯ ತಂತ್ರಜ್ಞಾನದಲ್ಲಿ ನಮ್ಮ ಪ್ರಮುಖ ಸ್ಥಾನದ ಮೇಲೆ ಪರಿಣಾಮ ಬೀರಬಾರದು. ಈ ನೀತಿಯಿಂದ ಹೆಚ್ಚು ನುರಿತ ನೇಮಕಾತಿಗೆ ವಿನಾಯಿತಿ ನೀಡುವ ಎಚ್ಚರಿಕೆಗಳು ಇರಬೇಕುʼ ಎಂದು ಕಿರಣ್ ಮಜುಂದಾರ್ ಬಯೋಕಾನ್ ಲಿಮಿಟೆಡ್ನ ಕಾರ್ಯನಿರ್ವಹಕ ಅಧ್ಯಕ್ಷ ಮುಂಜುಂದಾರ್ ಸಲಹೆ ನೀಡಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…