ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಅಂದರೆ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ನಿನ್ನೆ(ಜು.16) ನಡೆದ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದರೆ, ಇದಕ್ಕೆ ಉದ್ಯಮಿ ಮೋಹನ್ ದಾಸ್ ಪೈ ಸೇರಿದಂತೆ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮಸೂದೆ ವಿಚಾರವಾಗಿ ಟ್ವೀಟ್ ಮಾಡಿರುವ ಉದ್ಯಮಿ ಮೋಹನ್ ದಾಸ್ ಪೈ, ಮಸೂದೆಯನ್ನು ಜಾರಿಗೆ ತರಬಾರದು. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.
ಮುಂದುವರೆದು, ಖಾಸಗಿ ಕಂಪನಿಗಳಿಗೆ ನೇಮಕ ಮಾಡಿಕೊಳ್ಳುವಾಗ ಸರ್ಕಾರಿ ಅಧಿಕಾರಿಗಳು ಸಂದರ್ಶನಕ್ಕೆ ಬರುತ್ತಾರಾ? ಸಂದರ್ಶನ ಸಮಯದಲ್ಲಿ ಅವರ ಭಾಷೆಯನ್ನು ಪರೀಕ್ಷಿಸಿ ನೇಮಕ ಮಾಡಿಕೊಳ್ಳಬೇಕಾ? ಕಾಂಗ್ರಸ್ ಸರ್ಕಾರ ಇಂತಹ ಮಸೂದೆ ಜಾರಿ ಮಾಡಲು ಮುಂದಾಗಿರುವುದು ನಂಬಲು ಅಸಾಧ್ಯ ಎಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಈ ಬಗ್ಗೆ ʼಟೆಕ್ ಹಬ್ ಆಗಿ ನುರಿತ ಪ್ರತಿಭೆಗಳ ಅಗತ್ಯವಿದೆ. ಸ್ಥಳೀಯರಿಗೆ ಉದ್ಯೋಗಗಳನ್ನು ಒದಗಿಸುವ ಗುರಿಯ ತಂತ್ರಜ್ಞಾನದಲ್ಲಿ ನಮ್ಮ ಪ್ರಮುಖ ಸ್ಥಾನದ ಮೇಲೆ ಪರಿಣಾಮ ಬೀರಬಾರದು. ಈ ನೀತಿಯಿಂದ ಹೆಚ್ಚು ನುರಿತ ನೇಮಕಾತಿಗೆ ವಿನಾಯಿತಿ ನೀಡುವ ಎಚ್ಚರಿಕೆಗಳು ಇರಬೇಕುʼ ಎಂದು ಕಿರಣ್ ಮಜುಂದಾರ್ ಬಯೋಕಾನ್ ಲಿಮಿಟೆಡ್ನ ಕಾರ್ಯನಿರ್ವಹಕ ಅಧ್ಯಕ್ಷ ಮುಂಜುಂದಾರ್ ಸಲಹೆ ನೀಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…