ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಅಂದರೆ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ನಿನ್ನೆ(ಜು.16) ನಡೆದ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದರೆ, ಇದಕ್ಕೆ ಉದ್ಯಮಿ ಮೋಹನ್ ದಾಸ್ ಪೈ ಸೇರಿದಂತೆ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮಸೂದೆ ವಿಚಾರವಾಗಿ ಟ್ವೀಟ್ ಮಾಡಿರುವ ಉದ್ಯಮಿ ಮೋಹನ್ ದಾಸ್ ಪೈ, ಮಸೂದೆಯನ್ನು ಜಾರಿಗೆ ತರಬಾರದು. ಇದು ಸಂವಿಧಾನ ವಿರೋಧಿಯಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.
ಮುಂದುವರೆದು, ಖಾಸಗಿ ಕಂಪನಿಗಳಿಗೆ ನೇಮಕ ಮಾಡಿಕೊಳ್ಳುವಾಗ ಸರ್ಕಾರಿ ಅಧಿಕಾರಿಗಳು ಸಂದರ್ಶನಕ್ಕೆ ಬರುತ್ತಾರಾ? ಸಂದರ್ಶನ ಸಮಯದಲ್ಲಿ ಅವರ ಭಾಷೆಯನ್ನು ಪರೀಕ್ಷಿಸಿ ನೇಮಕ ಮಾಡಿಕೊಳ್ಳಬೇಕಾ? ಕಾಂಗ್ರಸ್ ಸರ್ಕಾರ ಇಂತಹ ಮಸೂದೆ ಜಾರಿ ಮಾಡಲು ಮುಂದಾಗಿರುವುದು ನಂಬಲು ಅಸಾಧ್ಯ ಎಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಈ ಬಗ್ಗೆ ʼಟೆಕ್ ಹಬ್ ಆಗಿ ನುರಿತ ಪ್ರತಿಭೆಗಳ ಅಗತ್ಯವಿದೆ. ಸ್ಥಳೀಯರಿಗೆ ಉದ್ಯೋಗಗಳನ್ನು ಒದಗಿಸುವ ಗುರಿಯ ತಂತ್ರಜ್ಞಾನದಲ್ಲಿ ನಮ್ಮ ಪ್ರಮುಖ ಸ್ಥಾನದ ಮೇಲೆ ಪರಿಣಾಮ ಬೀರಬಾರದು. ಈ ನೀತಿಯಿಂದ ಹೆಚ್ಚು ನುರಿತ ನೇಮಕಾತಿಗೆ ವಿನಾಯಿತಿ ನೀಡುವ ಎಚ್ಚರಿಕೆಗಳು ಇರಬೇಕುʼ ಎಂದು ಕಿರಣ್ ಮಜುಂದಾರ್ ಬಯೋಕಾನ್ ಲಿಮಿಟೆಡ್ನ ಕಾರ್ಯನಿರ್ವಹಕ ಅಧ್ಯಕ್ಷ ಮುಂಜುಂದಾರ್ ಸಲಹೆ ನೀಡಿದ್ದಾರೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…