ವಿಜಯಪುರ: ರಾಜ್ಯ ಸರ್ಕಾರ ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ.4% ಮೀಸಲಾತಿಯನ್ನು ನಿನ್ನೆ ಸದನದಲ್ಲಿ ವಿಧೆಯಕ ಮಂಡಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ವಿಧೇಯಕ 2025 ಅನ್ನು ನಿನ್ನೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಸದನದಲ್ಲಿ ವಿಧೇಯಕ ಮಂಡನೆ ಮಾಡಿದ್ದರು. ಆದರೆ ಇದೀಗ ವಿಧೇಯಕ ಮಂಡನೆ ಹಿನ್ನೆಲೆ ರಾಜ್ಯ ಸರ್ಕಾರದ ನಡೆಗೆ ವಿರೋಧ ವ್ಯಕ್ತ ಪಡಿಸಿ ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ಸೂಚಿಸಬಾರದು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ನೀಡಬೇಕೆಂದು ಸೋಮವಾರ ಸದನದಲ್ಲಿ ಬಿಲ್ ಮಂಡಿಸಿರುವುದು ಸಂವಿಧಾನ ಬಾಹಿರವಾಗಿದೆ. ಹೀಗಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡಬಾರದು ಎಂದು ಮನವಿ ಮಾಡಿದ್ದಾರೆ.





