ರಾಜ್ಯ

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ ಗ್ರಾಮ ಪಂಚಾಯತಿಯ ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿಯೇ ಪಡೆಯಬಹುದು.

ಹೋಬಳಿ ಕೇಂದ್ರಗಳಿಗೆ ಅಲೆಯುವ ಬವಣೆ ತಪ್ಪಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಈ ಪ್ರಮಾಣ ಪತ್ರವನ್ನು ಸಂಪೂರ್ಣ ಉಚಿತವಾಗಿ ನೀಡಲಿದ್ದಾರೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ದೇಶನದ ಮೇರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದರ್ಶಿಗಳು ಈ ಆದೇಶವನ್ನು ಹೊರಡಿಸಿದ್ದಾರೆ. ಇದರಿಂದ ಗ್ರಾಮೀಣ ಜನರ ಸಮಯ ಮತ್ತು ಹಣ ಉಳಿತಾಯವಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಪ್ರಕಟವಾಗಲಿದೆ.

ಪಿಡಿಓಗಳಿಗೆ ಅಧಿಕಾರ:

ಸದ್ಯ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿರುವ ’ಬಾಪೂಜಿ ಸೇವಾ ಕೇಂದ್ರ’ಗಳ ಮೂಲಕ ಸರ್ಕಾರದ ೮೫ಕ್ಕೂ ಹೆಚ್ಚು ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ ಇದೇ ಕೇಂದ್ರಗಳ ಮೂಲಕ ವಾಸಸ್ಥಳ ದೃಢೀಕರಣ ಪತ್ರವನ್ನು ನೀಡುವ ಅಧಿಕಾರವನ್ನು ಆಯಾ ಗ್ರಾಮ ಪಂಚಾಯತಿಯ ‘ಪಂಚಾಯತಿ ಅಭಿವೃದ್ಧಿ ಅಧಿಕಾರಿ’ಗೆ (ಪಿಡಿಒ) ನೀಡಲಾಗಿದೆ. ಇದರಿಂದ ಗ್ರಾಮೀಣ ಜನರು ಸ್ಥಳೀಯವಾಗಿ ಹಾಗೂ ವಿಳಂಬವಿಲ್ಲದೆ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗಲಿದೆ.

ಶೀಘ್ರದಲ್ಲೇ ಪ್ರತ್ಯೇಕ ಮಾರ್ಗಸೂಚಿ:

ವಾಸಸ್ಥಳ ದೃಢೀಕರಣ ಪತ್ರವನ್ನು ನೀಡಲು ಸಾರ್ವಜನಿಕರು ಒದಗಿಸಬೇಕಾದ ಅಗತ್ಯ ದಾಖಲೆಗಳು ಯಾವುವು ಮತ್ತು ಇದರ ಸಂಪೂರ್ಣ ಕಾರ್ಯವಿಧಾನ ಹೇಗಿರಲಿದೆ ಎಂಬುದರ ಕುರಿತು ಶೀಘ್ರದಲ್ಲೇ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಹಿಂದಿನ ಸಮಸ್ಯೆಯೇನಿತ್ತು?
ಈವರೆಗೆ ಗ್ರಾಮೀಣ ಭಾಗದ ನಾಗರಿಕರು ಶಾಲಾ-ಕಾಲೇಜು ಪ್ರವೇಶ, ಉದ್ಯೋಗ, ಸರ್ಕಾರಿ ಸೌಲಭ್ಯಗಳು ಸೇರಿದಂತೆ ಹಲವು ಉದ್ದೇಶಗಳಿಗಾಗಿ ವಾಸಸ್ಥಳ ಪ್ರಮಾಣ ಪತ್ರವನ್ನು ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಮೂಲಕ ಪಡೆಯಬೇಕಾಗಿತ್ತು. ಇದಕ್ಕಾಗಿ ಗ್ರಾಮಸ್ಥರು ಹೋಬಳಿ ಕೇಂದ್ರಗಳಿಗೆ ಭೇಟಿ ನೀಡುವುದು ಅನಿವಾರ್ಯವಾಗಿತ್ತು. ಇದರಿಂದಾಗಿ ತುರ್ತು ಸಂದರ್ಭಗಳಲ್ಲಿ ಪ್ರಮಾಣ ಪತ್ರ ಪಡೆಯಲು ಸಾಕಷ್ಟು ವಿಳಂಬವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು.

ಆದೇಶದ ಪ್ರಮುಖ ಅಂಶಗಳು
* ಪಿಡಿಓಗಳು ತಮ್ಮ ವ್ಯಾಪ್ತಿಯ ಅರ್ಹ ನಿವಾಸಿಗಳಿಗೆ ಒಂದು ಬಾರಿಗೆ ಅಭಿಯಾನದ ಮಾದರಿಯಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸಿ ಪತ್ರ ನೀಡಬೇಕು
* ವಾಸಸ್ಥಳ ದೃಢೀಕರಣ ಪತ್ರವನ್ನು  ’ಅಟಲ್ ಜೀ ಜನಸ್ನೇಹಿ ಕೇಂದ್ರ’ದ ತಂತ್ರಾಂಶದಲ್ಲಿ ಲಭ್ಯವಿರುವ ಸೇವೆಯನ್ನೇ ಬಳಸಿಕೊಳ್ಳಬೇಕು
* ವಾಸಸ್ಥಳ ಪ್ರಮಾಣ ಪತ್ರವನ್ನು ನೀಡಲು ಸಾರ್ವಜನಿಕರಿಂದ ‘ಯಾವುದೇ ಸೇವಾ ಶುಲ್ಕವನ್ನು ವಿಧಿಸುವಂತಿಲ್ಲ’. ಸಂಪೂರ್ಣ ಉಚಿತವಾಗಿ ನೀಡಬೇಕು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

10 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

10 hours ago