ರಾಜ್ಯ

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ ಗ್ರಾಮ ಪಂಚಾಯತಿಯ ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿಯೇ ಪಡೆಯಬಹುದು.

ಹೋಬಳಿ ಕೇಂದ್ರಗಳಿಗೆ ಅಲೆಯುವ ಬವಣೆ ತಪ್ಪಿದ್ದು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಈ ಪ್ರಮಾಣ ಪತ್ರವನ್ನು ಸಂಪೂರ್ಣ ಉಚಿತವಾಗಿ ನೀಡಲಿದ್ದಾರೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ದೇಶನದ ಮೇರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದರ್ಶಿಗಳು ಈ ಆದೇಶವನ್ನು ಹೊರಡಿಸಿದ್ದಾರೆ. ಇದರಿಂದ ಗ್ರಾಮೀಣ ಜನರ ಸಮಯ ಮತ್ತು ಹಣ ಉಳಿತಾಯವಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಪ್ರಕಟವಾಗಲಿದೆ.

ಪಿಡಿಓಗಳಿಗೆ ಅಧಿಕಾರ:

ಸದ್ಯ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿರುವ ’ಬಾಪೂಜಿ ಸೇವಾ ಕೇಂದ್ರ’ಗಳ ಮೂಲಕ ಸರ್ಕಾರದ ೮೫ಕ್ಕೂ ಹೆಚ್ಚು ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ ಇದೇ ಕೇಂದ್ರಗಳ ಮೂಲಕ ವಾಸಸ್ಥಳ ದೃಢೀಕರಣ ಪತ್ರವನ್ನು ನೀಡುವ ಅಧಿಕಾರವನ್ನು ಆಯಾ ಗ್ರಾಮ ಪಂಚಾಯತಿಯ ‘ಪಂಚಾಯತಿ ಅಭಿವೃದ್ಧಿ ಅಧಿಕಾರಿ’ಗೆ (ಪಿಡಿಒ) ನೀಡಲಾಗಿದೆ. ಇದರಿಂದ ಗ್ರಾಮೀಣ ಜನರು ಸ್ಥಳೀಯವಾಗಿ ಹಾಗೂ ವಿಳಂಬವಿಲ್ಲದೆ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗಲಿದೆ.

ಶೀಘ್ರದಲ್ಲೇ ಪ್ರತ್ಯೇಕ ಮಾರ್ಗಸೂಚಿ:

ವಾಸಸ್ಥಳ ದೃಢೀಕರಣ ಪತ್ರವನ್ನು ನೀಡಲು ಸಾರ್ವಜನಿಕರು ಒದಗಿಸಬೇಕಾದ ಅಗತ್ಯ ದಾಖಲೆಗಳು ಯಾವುವು ಮತ್ತು ಇದರ ಸಂಪೂರ್ಣ ಕಾರ್ಯವಿಧಾನ ಹೇಗಿರಲಿದೆ ಎಂಬುದರ ಕುರಿತು ಶೀಘ್ರದಲ್ಲೇ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಹಿಂದಿನ ಸಮಸ್ಯೆಯೇನಿತ್ತು?
ಈವರೆಗೆ ಗ್ರಾಮೀಣ ಭಾಗದ ನಾಗರಿಕರು ಶಾಲಾ-ಕಾಲೇಜು ಪ್ರವೇಶ, ಉದ್ಯೋಗ, ಸರ್ಕಾರಿ ಸೌಲಭ್ಯಗಳು ಸೇರಿದಂತೆ ಹಲವು ಉದ್ದೇಶಗಳಿಗಾಗಿ ವಾಸಸ್ಥಳ ಪ್ರಮಾಣ ಪತ್ರವನ್ನು ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಮೂಲಕ ಪಡೆಯಬೇಕಾಗಿತ್ತು. ಇದಕ್ಕಾಗಿ ಗ್ರಾಮಸ್ಥರು ಹೋಬಳಿ ಕೇಂದ್ರಗಳಿಗೆ ಭೇಟಿ ನೀಡುವುದು ಅನಿವಾರ್ಯವಾಗಿತ್ತು. ಇದರಿಂದಾಗಿ ತುರ್ತು ಸಂದರ್ಭಗಳಲ್ಲಿ ಪ್ರಮಾಣ ಪತ್ರ ಪಡೆಯಲು ಸಾಕಷ್ಟು ವಿಳಂಬವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು.

ಆದೇಶದ ಪ್ರಮುಖ ಅಂಶಗಳು
* ಪಿಡಿಓಗಳು ತಮ್ಮ ವ್ಯಾಪ್ತಿಯ ಅರ್ಹ ನಿವಾಸಿಗಳಿಗೆ ಒಂದು ಬಾರಿಗೆ ಅಭಿಯಾನದ ಮಾದರಿಯಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸಿ ಪತ್ರ ನೀಡಬೇಕು
* ವಾಸಸ್ಥಳ ದೃಢೀಕರಣ ಪತ್ರವನ್ನು  ’ಅಟಲ್ ಜೀ ಜನಸ್ನೇಹಿ ಕೇಂದ್ರ’ದ ತಂತ್ರಾಂಶದಲ್ಲಿ ಲಭ್ಯವಿರುವ ಸೇವೆಯನ್ನೇ ಬಳಸಿಕೊಳ್ಳಬೇಕು
* ವಾಸಸ್ಥಳ ಪ್ರಮಾಣ ಪತ್ರವನ್ನು ನೀಡಲು ಸಾರ್ವಜನಿಕರಿಂದ ‘ಯಾವುದೇ ಸೇವಾ ಶುಲ್ಕವನ್ನು ವಿಧಿಸುವಂತಿಲ್ಲ’. ಸಂಪೂರ್ಣ ಉಚಿತವಾಗಿ ನೀಡಬೇಕು

 

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

29 mins ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

51 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

4 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

5 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

16 hours ago