ರಾಜ್ಯ

ಕನ್ನಡಿಗ ರಾಹುಲ್ ದ್ರಾವಿಡ್ ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ

ಬೆಂಗಳೂರು : ಇಂದು ಅಧಿವೇಶನದಲ್ಲಿ ಟಿ೨೦ ವಿಶ್ವಕಪ್‌ ೨೦೨೪ ರ ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್‌ ರಾಹುಲ್‌ ದ್ರಾವಿಡ್‌ ಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು.

ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ , ಭಾರತ ಟಿ.೨೦ ವಿಶ್ವಕಪ್‌ ಗೆಲುವಿನ ವೇಳೆ ಟೀಂ ಇಂಡಿಯಾದ ಮುಖ್ಯಕೋಚ್‌ ಆಗಿದ್ದ ಕನ್ನಡಿಗ ರಾಹುಲ್‌ ದ್ರಾವಿಡ್‌ ಅವರಿಗೆ ಸನ್ಮಾನಿಸಬೇಕು ಎಂದು ಮನವಿ ಮಾಡಿದರು. ಬಳಿಕ ಸದನದ ಎಲ್ಲಾ ಸದಸ್ಯರು ಈ ಮನವಿಯನ್ನ ಸ್ವಾಗತಿಸಿದರು. ಬಳಿಕ ಈ ವಿಚಾರವಾಗಿ ಸ್ಪೀಕರ್‌ ಯು.ಟಿ ಖಾದರ್‌ ಪ್ರತಿಕ್ರಿಯಿಸಿ, ಕರ್ನಾಟಕದ ಜನತೆಯ ಪರವಾಗಿ ದ್ರಾವಿಡ್‌ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬೆಂಗಳೂರು | 4 ವರ್ಷದ ಬಾಲಕಿ ಬರ್ಬರ ಹತ್ಯೆ ; ಅತ್ಯಾಚಾರ ಶಂಕೆ

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…

19 mins ago

ಇರಾನ್‌ ಮೇಲೆ ರಣಭೀಕರ ದಾಳಿಗೆ ಅಮೆರಿಕ ಪ್ಲ್ಯಾನ್‌

ವಾಷಿಂಗ್ಟನ್‌ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…

36 mins ago

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

2 hours ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

3 hours ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

4 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

4 hours ago