ರಾಜ್ಯ

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ವಿಧಾನಸೌಧಕ್ಕೆ ಬರೆದಿರುವ ಪತ್ರ ವೈರಲ್‌ ಆಗಿದೆ.

ನಿರ್ದೇಶಕರು, ವಾರ್ತಾ ಮತ್ತು ಪ್ರಚಾರ ಇಲಾಖೆ ಇವರಿಗೆ ಸರ್ಕಾರ್‌ ಅಧೀನ ಕಾರ್ಯದರ್ಶಿ ಬರೆದಿರುವ ಪತ್ರವು ಮಾಧ್ಯಮದವರು ವಿಧಾನಸೌಧ ಕಟ್ಟಡದಲಲಿ ಅವರಿಗೆ ನಿಗದಿಪಡಿಸಲಾದ ಸ್ಥಳದಲ್ಲಿ ಮಾತ್ರ ಸಂದರ್ಶನ ಮಾಡುವಂತೆ ನಿರ್ದೇಶನ ನೀಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಗುರುತಿನ ಚೀಟಿ ಹೊಂದಿರುವ ಎಲ್ಲಾ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಭದ್ರತಾ ಹಿತದೃಷ್ಟಿಯಿಂದ ವಿಧಾನಸೌಧ ಪಶ್ಚಿಮ ದ್ವಾರದ ಪೋರ್ಟಿಕೋ ಬಳಿ ನಿಗದಿಪಡಿಸಲಾಗಿರುವ ಸ್ಥಳದಲ್ಲಿ ಮಾತ್ರ ಭೈಟ್‌, ಹೇಳಿಕೆಗಳನ್ನು ಪಡೆದುಕೊಳ್ಳುವಂತೆ ಹಾಗೂ ವಿಧಾನಸೌಧ ಒಳ ಪ್ರವೇಶಿಸುವ ಸಂದರ್ಭದಲ್ಲಿ ಸಿಎಂ, ಡಿಸಿಎಂ, ಸಚಿವರು, ಗಣ್ಯ ವ್ಯಕ್ತಿಗಳಿಂದ ಭೈಟ್‌ ತೆಗೆದುಕೊಳ್ಳಲು ಹಿಂಬಾಲಿಸದಂತೆ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡುವಂತೆ ನಿರ್ದೇಶನ ನೀಡಲಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

2 hours ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

2 hours ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

2 hours ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

2 hours ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

2 hours ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

2 hours ago