ರಾಜ್ಯ

ಸಂಘ ಸಂಸ್ಥೆಗೆ ನಿರ್ಬಂಧ | ಜಗದೀಶ್ ಶೆಟ್ಟರ್ ಹೊರಡಿಸಿದ್ದ ಆದೇಶವನ್ನೇ ನಾವೂ ಹೊರಡಿಸಿದ್ದೇವೆ : ಸಿ.ಎಂ

ಪುತ್ತೂರು : ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.

ಇದನ್ನು ಓದಿ: RSS ನಿಷೇಧ ಹಾಸ್ಯಾಸ್ಪದ : ಮಾಜಿ ಶಾಸಕ ಬಿ.ಹರ್ಷವರ್ಧನ್

2013 ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.

ಅನುಮತಿ ನೀಡುವುದು ಕಡ್ಡಾಯವಲ್ಲ
ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

28 mins ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

40 mins ago

ಧುರಂಧರ್‌-2 ಚಿತ್ರ ವೀಕ್ಷಿಸಿ ನಟಿ ರಮ್ಯಾ ಗರಂ: ಫ್ಯಾನ್ಸ್‌ಗೆ ಏನಂದು ಗೊತ್ತಾ?

ಬಹುನಿರೀಕ್ಷಿತ ಧುರಂಧರ್‌-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್‌ ವಿಮರ್ಶೆ ಈಗ ಸೋಚಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…

1 hour ago

ಕಬಿನಿ ಕಾಡಿನಲ್ಲಿ ಹುಲಿಗಳ ಸ್ವಚ್ಛಂದ ವಿಹಾರ: ವಿಡಿಯೋ ವೈರಲ್‌

ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.…

1 hour ago

ಮಂಡ್ಯ| ಮೂರು ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಕೊನೆಗೂ ಸೆರೆ

ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ…

1 hour ago

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆಹಾರ ರೈಸ್‌ಮಿಲ್‌ನಲ್ಲಿ ಪತ್ತೆ

ಕೆ.ಆರ್‌.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್‌ಮಿಲ್‌ನಲ್ಲಿ ಪತ್ತೆಯಾಗಿದೆ. ಮಾರ್ಚ್.‌17ರಂದು ರೈತ…

2 hours ago