ಪುತ್ತೂರು : ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.
ಇದನ್ನು ಓದಿ: RSS ನಿಷೇಧ ಹಾಸ್ಯಾಸ್ಪದ : ಮಾಜಿ ಶಾಸಕ ಬಿ.ಹರ್ಷವರ್ಧನ್
2013 ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.
ಅನುಮತಿ ನೀಡುವುದು ಕಡ್ಡಾಯವಲ್ಲ
ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದರು.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…