ರಾಜ್ಯ

ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಸರ್ಕಾರ ಆದೇಶ

ಬೆಂಗಳೂರು : ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೂ ಸರ್ಕಾರ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಈ ಮೂಲಕ ನಿವೃತ್ತಿಯಾದ ನೌಕರರಿಗೆ ಶುಭ ಸುದ್ದಿ ಕೊಟ್ಟಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದ್ದು, 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ.

ಇನ್ನು ಆದೇಶದಲ್ಲಿ 2023 ರ ಮಾರ್ಚ್​​ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿಗಳು ಮತ್ತು ನೌಕರರಿಗೆ 2019ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲ ವೇತನವನ್ನು ಪರಿಗಣಿಸಿ ಶೇ.15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಉಲ್ಲೇಖಿಸಲಾಗಿದೆ. ಇನ್ನು ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂಪಾಯಿ ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ.

ಅಲ್ಲದೆ 2023 ರ ಮಾರ್ಚ್ 01 ರಂದು ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020 ರ ಜನವರಿ 1 ರಿಂದ 2023 ರ ಫೆಬ್ರವರಿ 28 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಜೊತೆಗೆ ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಸರ್ಕಾರ ಆದೇಶಿಸಿದೆ

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

2 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

4 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

5 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

6 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

7 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

7 hours ago