ರಾಜ್ಯ

ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಸರ್ಕಾರ ಆದೇಶ

ಬೆಂಗಳೂರು : ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೂ ಸರ್ಕಾರ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಈ ಮೂಲಕ ನಿವೃತ್ತಿಯಾದ ನೌಕರರಿಗೆ ಶುಭ ಸುದ್ದಿ ಕೊಟ್ಟಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದ್ದು, 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ.

ಇನ್ನು ಆದೇಶದಲ್ಲಿ 2023 ರ ಮಾರ್ಚ್​​ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿಗಳು ಮತ್ತು ನೌಕರರಿಗೆ 2019ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲ ವೇತನವನ್ನು ಪರಿಗಣಿಸಿ ಶೇ.15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಉಲ್ಲೇಖಿಸಲಾಗಿದೆ. ಇನ್ನು ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂಪಾಯಿ ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ.

ಅಲ್ಲದೆ 2023 ರ ಮಾರ್ಚ್ 01 ರಂದು ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020 ರ ಜನವರಿ 1 ರಿಂದ 2023 ರ ಫೆಬ್ರವರಿ 28 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಜೊತೆಗೆ ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಸರ್ಕಾರ ಆದೇಶಿಸಿದೆ

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

1 min ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

28 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

59 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

1 hour ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

2 hours ago