ರಾಜ್ಯ

ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಸರ್ಕಾರ ಆದೇಶ

ಬೆಂಗಳೂರು : ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೂ ಸರ್ಕಾರ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಈ ಮೂಲಕ ನಿವೃತ್ತಿಯಾದ ನೌಕರರಿಗೆ ಶುಭ ಸುದ್ದಿ ಕೊಟ್ಟಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದ್ದು, 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ.

ಇನ್ನು ಆದೇಶದಲ್ಲಿ 2023 ರ ಮಾರ್ಚ್​​ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿಗಳು ಮತ್ತು ನೌಕರರಿಗೆ 2019ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲ ವೇತನವನ್ನು ಪರಿಗಣಿಸಿ ಶೇ.15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಉಲ್ಲೇಖಿಸಲಾಗಿದೆ. ಇನ್ನು ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂಪಾಯಿ ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ.

ಅಲ್ಲದೆ 2023 ರ ಮಾರ್ಚ್ 01 ರಂದು ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020 ರ ಜನವರಿ 1 ರಿಂದ 2023 ರ ಫೆಬ್ರವರಿ 28 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಜೊತೆಗೆ ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಸರ್ಕಾರ ಆದೇಶಿಸಿದೆ

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

7 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

8 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

8 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

13 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

16 hours ago