ರಾಜ್ಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

ಇದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಇದು ರಾಜ್ಯ ರಾಜಕೀಯದಲ್ಲಿ ಪಕ್ಷಪಾತದ ಹೊಸ ಆರೋಪಗಳಿಗೆ ಕಾರಣವಾಗಿದೆ. ಮೇ 28 ರಂದು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಕೆಲವೇ ದಿನಗಳ ಮೊದಲು, ಮೇ 21 ರ ಸುಮಾರಿಗೆ ನ್ಯಾಯಮೂರ್ತಿ ದೇಸಾಯಿ ಅವರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿತು.

ಮುಖ್ಯಮಂತ್ರಿಗಳ ಪತ್ನಿ ಪಾರ್ವತಿ ಸಿದ್ದರಾಮಯ್ಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ಪಡೆದ ನಿವೇಶನ ಸಂಬಂಧ, ಭೂ ಮಂಜೂರಾತಿ ಪ್ರಕರಣದ ತನಿಖೆ ನಡೆಸಿದ ಏಕಸದಸ್ಯ ನ್ಯಾಯಾಂಗ ಆಯೋಗದ ನೇತೃತ್ವವನ್ನು ನ್ಯಾಯಮೂರ್ತಿ ದೇಸಾಯಿ ವಹಿಸಿದ್ದರು, ಮುಡಾದಿಂದ ಪರ್ಯಾಯ ನಿವೇಶನಗಳ ಹಂಚಿಕೆ ಕಾನೂನುಬಾಹಿರವಲ್ಲ ಎಂದು ತೀರ್ಮಾನಿಸಿ ನ್ಯಾಯಮೂರ್ತಿ ದೇಸಾಯಿ ಆಯೋಗವು ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿತು. ಈ ವರದಿಯನ್ನು ಸೆಪ್ಟೆಂಬರ್ 2025 ರಲ್ಲಿ ರಾಜ್ಯ ಸಚಿವ ಸಂಪುಟ ಅಂಗೀಕರಿಸಿತು.

ಸಿದ್ದರಾಮಯ್ಯ ಯಾರ ಋಣವನ್ನೂ ಇಟ್ಟುಕೊಳ್ಳುವ ವ್ಯಕ್ತಿಯಲ್ಲ. ಹೀಗಾಗಿ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರಿಗೆ ಕೃತಜ್ಞತೆ ಸಲ್ಲಿಸಲು ಅವರನ್ನು ರಾಜ್ಯ ಮಾನವಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮುಡಾ ಪ್ರಕರಣವು ಸಿದ್ದರಾಮಯ್ಯ ಸರ್ಕಾರಕ್ಕೆ ದೊಡ್ಡ ರಾಜಕೀಯ ಮುಜುಗರವನ್ನುಂಟು ಮಾಡಿತ್ತು. ನಿಯಮಗಳನ್ನು ಉಲ್ಲಂಘಿಸಿ, ಪಾರ್ವತಿ ಸಿದ್ದರಾಮಯ್ಯ ಅವರು ಪೂರ್ವಜರ ಭೂಮಿಗೆ ಬದಲಾಗಿ ಮೈಸೂರಿನ ಪ್ರಮುಖ ಬಡಾವಣೆಯಲ್ಲಿ 14 ಪರಿಹಾರ ನಿವೇಶನಗಳನ್ನು ಪಡೆದಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.

ತೀವ್ರ ಒತ್ತಡದ ನಡುವೆ ಸರ್ಕಾರ ಆರೋಪಗಳನ್ನು ತನಿಖೆ ಮಾಡಲು ನ್ಯಾಯಮೂರ್ತಿ ದೇಸಾಯಿ ಅವರನ್ನು ನೇಮಿಸಿತು. ಅವರ ವರದಿಯು ಕೆಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವುದರ ಜೊತೆಗೆ ಕುಟುಂಬವನ್ನು ಹೆಚ್ಚಾಗಿ ದೋಷಮುಕ್ತಗೊಳಿಸಿತು. ಅನುಕೂಲಕರ ವರದಿಯನ್ನು ನೀಡಿದ ಅದೇ ನ್ಯಾಯಾಧೀಶರನ್ನು ರಾಜ್ಯದ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಯ ಮುಖ್ಯಸ್ಥರನ್ನಾಗಿ ನೇಮಿಸಿರುವುದು, ಅದು ಕೂಡ ಮುಖ್ಯಮಂತ್ರಿ ಸ್ವತಃ ನಿರ್ಗಮಿಸುವ ಮುನ್ನಾದಿನ ತೆಗೆದುಕೊಂಡಿರುವ ಈ ನಿರ್ಧಾರ ರಾಜಕೀಯ ವಲಯಗಳಲ್ಲಿಯೂ ಹುಬ್ಬೇರಿಸಿದೆ.

ವಿಧಾನ ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ, ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಈ ನೇಮಕಾತಿಯನ್ನು ಅನುಮೋದಿಸಿದ್ದಾರೆ. ಡಿ.ಕೆ. ಶಿವಕುಮಾರ್ ಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿರುವುದರಿಂದ, ಹೊಸ ಆಡಳಿತವು ಸಿದ್ದರಾಮಯ್ಯ ಆಡಳಿತದ ಕೊನೆಯ ದಿನಗಳಲ್ಲಿ ಮಾಡಿದ ನೇಮಕಾತಿಗಳನ್ನು ಮರುಪರಿಶೀಲಿಸುತ್ತದೆಯೇ ಅಥವಾ ನಿಲ್ಲಿಸುತ್ತದೆಯೇ ಎಂಬ ಪ್ರಶ್ನೆಗಳು ಎದುರಾಗಿದೆ.

 

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

3 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

3 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

3 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

6 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

7 hours ago