ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಕರೆ ನೀಡಿದ ಸಿ.ಎಂ ಸಿದ್ದರಾಮಯ್ಯ ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್ ಪಡೆಯಲಾಗುವುದು ಎಂದು ಘೋಷಿಸಿದರು.
ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.
ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು.
ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮಭಾಷೆಯಾಗುತ್ತದೆ ಎಂದರು.
ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಬಳಸಬೇಕು, ಬೆಳೆಸಬೇಕು, ಬೆಳಗಬೇಕು. ನಾವು ನಮ್ಮ ಸಹೋದರ ಮತ್ತು ಇತರೆ ಭಾಷಿಕರ ಜೊತೆ ಕನ್ನಡದಲ್ಲಿ ಮಾತನಡುವ, ವ್ಯವಹರಿಸುವ ಸಂಸ್ಕೃತಿಯನ್ನು ಪಾಲಿಸಬೇಕು ಎಂದು ಕರೆ ನೀಡಿದರು.
ಇತರೆ ಭಾಷೆಯಲ್ಲಿ ತಪ್ಪು ತಪ್ಪಾಗಿ ಮಾತನಾಡುವುದಕ್ಕಿಂತ ನಮ್ಮದೇ ಭಾಷೆಯಲ್ಲಿ ಮಾತಾಡಬೇಕು. ಅಕ್ಕ ಪಕ್ಕದ ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಜನರಾಡುವ ಭಾಷೆಯೇ ಸಾರ್ವಭೌಮ. ನಮ್ಮಲ್ಲೂ ಇದನ್ನೇ ಆಚರಿಸಬೇಕು ಎಂದು ಕರೆ ನೀಡಿದರು.
ಒಂದು ಭಾಷೆ ಮಾತನಾಡುವ ಜನ ಒಂದು ಆಡಳಿತದ ಸೂರಿನಡಿ ಬರಬೇಕು ಎನ್ನುವುದು ಕನ್ನಡ ಏಕೀಕರಣ ಚಳವಳಿಯ ಆಶಯವಾಗಿತ್ತು. ಈ ಆಶಯ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಕನ್ನಡ ಓದುವುದನ್ನು, ಬರೆಯುವುದನ್ನು ಹೆಚ್ಚೆಚ್ಚು ಕಲಿಯಬೇಕು, ಕಲಿಸಬೇಕು ಎಂದು ಕರೆ ನೀಡಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…