ರಾಜ್ಯ

ಜಾಮೀನು ಸಿಕ್ಕರೂ ಬಿಡುಗಡೆಯಾಗದ ರೇವಣ್ಣ !

ಬೆಂಗಳೂರು : ಹಾಸನ ಮಹಿಳೆಯ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ಹಾಸನದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಎಯ ಅಪಹರಣಕ್ಕೆ ಸಂಬಂಧಿಸಿದಂಸಂತಸತೆ ನೀಡಿದ್ದ ದೂರಿನ ಮೇರೆಗೆ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ತಂಡ ಬಂಧಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಪಡೆಯಲು ಜಾಮೀನಿಗಾಗಿ ರೇವಣ್ಣ ಅವರು ತುಂಬ ಪ್ರಯತ್ನ ಪಟ್ಟಿದ್ದರೂ ನ್ಯಾಯಾಲಯದಿಂದ ಜಾಮೀನು ಸಿಕ್ಕಿರಲಿಲ್ಲ.

ಆದರೆ ಇಂದು ನ್ಯಾಯಾಲಯ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಆದರೆ ಜಾಮೀನಿನ ಆದೇಶ ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಮುಗಿದ ಕಾರಣ ಜಾಮೀನಿನ ಪ್ರತಿ ನಾಳೆ ರೇವಣ್ಣ ಅವರ ವಕೀಲರ ಕೈ ಸೇರಲಿದೆ.

ಹೀಗಾಗಿ ನಾಳೆ ಜಾಮಿನು ಪ್ರತಿ ಸಿಕ್ಕ ಬಳಿಕ ಅದನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸಲ್ಲಿಸಿದ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗುವುದಾಗಿ ರೇವಣ್ಣ ಆಪ್ತವಲಯ ತಿಳಿಸಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ…

19 mins ago

ಮಹಾರಾಷ್ಟ್ರದಲ್ಲಿ ಘೋರ ದುರಂತ: ಕಾರು ಬಾವಿಗೆ ಬಿದ್ದು ಒಂದೇ ಕುಟುಂಬದ 9 ಮಂದಿ ಸಾವು

ನಾಸಿಕ್:‌ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರ್ಷಿಕ…

1 hour ago

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ ಪ್ರಕರಣ: ಆರೋಪಿ ವಿರುದ್ಧ ಕ್ರಮಕ್ಕೆ ಸೂಚನೆ ಎಂದ ಸಚಿವ ಪರಮೇಶ್ವರ್‌

ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ಧ ಲವ್‌ ಜಿಹಾದ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು,…

1 hour ago

ಎಲ್‌ಪಿಜಿ ಗ್ಯಾಸ್‌ ಸಮಸ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ…

2 hours ago

ಧೋನಿ, ಕಪಿಲ್‌ ದೇವ್‌ಗೆ ಕ್ಷಮೆ ಕೇಳಿದ ಯುವರಾಜ್‌ ಸಿಂಗ್‌

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಭಾರತದ ವಿಶ್ವಕಪ್‌ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ಕಪಿಲ್‌…

2 hours ago

ರಾಜ್ಯದಲ್ಲಿ ಇಂದು ಕೂಡ ಮುಂದುವರಿಯಲಿದೆ ಮಳೆ ಆರ್ಭಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…

3 hours ago