ರಾಜ್ಯ

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು.

ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ. ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು.

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಟತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಮನವಿ ಸಲ್ಲಿಸಿತು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹ್ಮದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

9 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

9 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

9 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago