ರಾಜ್ಯ

ಟಿಕೆಟ್‌ ದರ ಹೆಚ್ಚಳ ಬೆನ್ನಲ್ಲೇ ಬಸ್‌ ಪಾಸ್‌ಗಳ ದರ ಕೂಡ ಏರಿಕೆ

ಬೆಂಗಳೂರು: ಸಾರಿಗೆ ಸಂಸ್ಥೆಯು ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್‌ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಏರಿಕೆಯಾಗಿದೆ.

ನಾಳೆಯಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಆಗಲಿದೆ. ಹಳೆಯ ಪಾಸ್‌ ದರವನ್ನು ಪರಿಷ್ಕರಿಸಿ ಹೊಸ ದರ ಕುರಿತು ಪ್ರಕಟಣೆ ಹೊರಡಿಸಲಾಗಿದೆ.

70 ರೂಪಾಯಿ ಇದ್ದ ಬಿಎಂಟಿಸಿ ಡೈಲಿ ಪಾಸ್‌ ದರ ಈಗ 80 ರೂಪಾಯಿ ಆಗಿದೆ. 300 ರೂ ಇದ್ದ ಬಿಎಂಟಿಸಿ ವಾರದ ಪಾಸ್‌ ದರ ಈಗ 350ರೂಗೆ ಏರಿಕೆಯಾಗಿದೆ. 945ರೂ ಇದ್ದ ಹಿರಿಯ ನಾಗರಿಕ ಮಾಸಿಕ ಪಾಸ್‌ ಈಗ 1080ರೂ ಆಗಿದೆ. 1050ರೂ ಇದ್ದ ಸಾಮಾನ್ಯ ಮಾಸಿಕ ಪಾಸ್‌ ದರ ಈಗ 1200ರೂಗೆ ಏರಿಕೆಯಾಗಿದೆ. 2200ರೂ ಇದ್ದ ನೈಸ್‌ ರೋಡ್‌ ಮಾಸಿಕ ಪಾಸ್‌ ದರ ಈಗ 2350 ರೂಗೆ ಏರಿಕೆಯಾಗಿದೆ.

ಇನ್ನು ಒಪ್ಪಂದದ ಮೇಲೆ ಪಡೆಯುವ ಬಸ್‌ಗಳ ದರವನ್ನು ಸಾರಿಗೆ ಇಲಾಖೆ ಏರಿಕೆ ಮಾಡಿದೆ. ಸಾಂದರ್ಭಿಕ ಒಪ್ಪಂದದ ಮೇಲೆ ಒದಗಿಸುವ ಬಸ್‌ಗಳ ಬಾಡಿಗೆ ಪರಿಷ್ಕರಣೆ ಮಾಡಲಾಗಿದೆ. ಈ ದರವನ್ನು ಕೆಎಸ್‌ಆರ್‌ಟಿಸಿ ಶೇಕಡಾ.15ರಷ್ಟು ಹೆಚ್ಚಳ ಮಾಡಿದೆ.

ಪ್ರತೀ ಕಿ.ಮೀ ದರದ ಮೇಲೆ ಬಾಡಿಗೆ ದರ ಹೆಚ್ಚಳ ಮಾಡಲಾಗಿದ್ದು, ಸಾಮಾನ್ಯ ಸಾರಿಗೆ, ಅಶ್ವಮೇಧ ಸೇರಿದಂತೆ 16 ಬಗೆಯ ಬಸ್‌ಗಳ ಬಾಡಿಗೆ ದರವನ್ನು ಸಹ ಏರಿಕೆ ಮಾಡಲಾಗಿದೆ.

ಇನ್ನು ಈಗಾಗಲೇ ಬುಕ್ಕಿಂಗ್‌ ಆಗಿರುವ ಒಪ್ಪಂದದ ವಾಹನಗಳಿಗೆ ಹಳೆಯ ದರವನ್ನೇ ವಿಧಿಸುವಂತೆ ಆದೇಶ ಹೊರಡಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

30 ಕೆಜಿ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ, ಇಬ್ಬರ ಬಂಧನ

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…

47 mins ago

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

2 hours ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

4 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

5 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

5 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

6 hours ago