ರಾಜ್ಯ

ಟಿಕೆಟ್‌ ದರ ಹೆಚ್ಚಳ ಬೆನ್ನಲ್ಲೇ ಬಸ್‌ ಪಾಸ್‌ಗಳ ದರ ಕೂಡ ಏರಿಕೆ

ಬೆಂಗಳೂರು: ಸಾರಿಗೆ ಸಂಸ್ಥೆಯು ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್‌ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಏರಿಕೆಯಾಗಿದೆ.

ನಾಳೆಯಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಆಗಲಿದೆ. ಹಳೆಯ ಪಾಸ್‌ ದರವನ್ನು ಪರಿಷ್ಕರಿಸಿ ಹೊಸ ದರ ಕುರಿತು ಪ್ರಕಟಣೆ ಹೊರಡಿಸಲಾಗಿದೆ.

70 ರೂಪಾಯಿ ಇದ್ದ ಬಿಎಂಟಿಸಿ ಡೈಲಿ ಪಾಸ್‌ ದರ ಈಗ 80 ರೂಪಾಯಿ ಆಗಿದೆ. 300 ರೂ ಇದ್ದ ಬಿಎಂಟಿಸಿ ವಾರದ ಪಾಸ್‌ ದರ ಈಗ 350ರೂಗೆ ಏರಿಕೆಯಾಗಿದೆ. 945ರೂ ಇದ್ದ ಹಿರಿಯ ನಾಗರಿಕ ಮಾಸಿಕ ಪಾಸ್‌ ಈಗ 1080ರೂ ಆಗಿದೆ. 1050ರೂ ಇದ್ದ ಸಾಮಾನ್ಯ ಮಾಸಿಕ ಪಾಸ್‌ ದರ ಈಗ 1200ರೂಗೆ ಏರಿಕೆಯಾಗಿದೆ. 2200ರೂ ಇದ್ದ ನೈಸ್‌ ರೋಡ್‌ ಮಾಸಿಕ ಪಾಸ್‌ ದರ ಈಗ 2350 ರೂಗೆ ಏರಿಕೆಯಾಗಿದೆ.

ಇನ್ನು ಒಪ್ಪಂದದ ಮೇಲೆ ಪಡೆಯುವ ಬಸ್‌ಗಳ ದರವನ್ನು ಸಾರಿಗೆ ಇಲಾಖೆ ಏರಿಕೆ ಮಾಡಿದೆ. ಸಾಂದರ್ಭಿಕ ಒಪ್ಪಂದದ ಮೇಲೆ ಒದಗಿಸುವ ಬಸ್‌ಗಳ ಬಾಡಿಗೆ ಪರಿಷ್ಕರಣೆ ಮಾಡಲಾಗಿದೆ. ಈ ದರವನ್ನು ಕೆಎಸ್‌ಆರ್‌ಟಿಸಿ ಶೇಕಡಾ.15ರಷ್ಟು ಹೆಚ್ಚಳ ಮಾಡಿದೆ.

ಪ್ರತೀ ಕಿ.ಮೀ ದರದ ಮೇಲೆ ಬಾಡಿಗೆ ದರ ಹೆಚ್ಚಳ ಮಾಡಲಾಗಿದ್ದು, ಸಾಮಾನ್ಯ ಸಾರಿಗೆ, ಅಶ್ವಮೇಧ ಸೇರಿದಂತೆ 16 ಬಗೆಯ ಬಸ್‌ಗಳ ಬಾಡಿಗೆ ದರವನ್ನು ಸಹ ಏರಿಕೆ ಮಾಡಲಾಗಿದೆ.

ಇನ್ನು ಈಗಾಗಲೇ ಬುಕ್ಕಿಂಗ್‌ ಆಗಿರುವ ಒಪ್ಪಂದದ ವಾಹನಗಳಿಗೆ ಹಳೆಯ ದರವನ್ನೇ ವಿಧಿಸುವಂತೆ ಆದೇಶ ಹೊರಡಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

2 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

4 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

12 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

15 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

16 hours ago