ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಏ.25 ರಿಂದ ಮೇ.8ರವರೆಗೆ ಈ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಫೆ.28 ರಿಂದ ಮಾ.17ರವರೆಗೆ ಸುಸೂತ್ರವಾಗಿ ನಡೆದಿತ್ತು. ಇದರ ಬೆನ್ನಲ್ಲೇ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಏ.25 ರಂದು ಕನ್ನಡ, ಅರೇಬಿಕ್, ಏ.27 ರಂದು ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ರಸಾಯನಶಾಸ್ತ್ರ, ಲೆಕ್ಕಶಾಸ್ತ್ರ, ಏ.28 ರಂದು ಇಂಗ್ಲಿಷ್ ಹಾಗೂ ಏ.29 ರಂದು ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಏ.30 ರಂದು ಅರ್ಥಶಾಸ್ತ್ರ, ಜೀವಶಾಸ್ತ್ರ, ಮೇ. 2ರಂದು ಇತಿಹಾಸ, ಗಣಿತ, ಗೃಹವಿಜ್ಞಾನ, ಮೇ.4 ರಂದು ರಾಜ್ಯಶಾಸ್ತ್ರ, ವಿದ್ಯುನಾನ ಶಾಸ್ತ್ರ, ಗಣಕವಿಜ್ಞಾನ ಹಾಗೂ ಮೇ.5 ರಂದು ಹಿಂದಿ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಮೇ.6 ರಂದು ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ.7 ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭಶಾಸ್ತ್ರ, ಮೂಲಗಣಿತ, ಮೇ.8 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಭಾಷೆಗಳ ಪರೀಕ್ಷೆಗಳು ನಡೆಯಲಿವೆ.
ಅಲ್ಲದೆ, ಅದೇ ದಿನ ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್ನೆಸ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…