ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಅವರಿಗೆ ನಾಚಿಕೆಯಾಗಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಜನಸಾಮಾನ್ಯರ ದಿನನಿತ್ಯದ ಸರಕುಗಳ ಮೇಲೆ ಜಿಎಸ್ಟಿ ವಿಧಿಸಿ, ಎಲ್ಲಾ ಅನಿಲಗಳ ದರವನ್ನು ಹೆಚ್ಚಿಸಿದವರು ಬಿಜೆಪಿಯವರೇ. ಈ ಹಿಂದೆ ಪೆಟ್ರೋಲ್ ಬೆಲೆ 70 ರೂ. ಇದ್ದದ್ದನ್ನು ಹೆಚ್ಚಳ ಮಾಡಿದ್ದು ಬಿಜೆಪಿ, ಆಗೆಯೇ ಅಡುಗೆ ಅನಿಲ ಬೆಲೆ 1,200 ರೂ. ಗೆ ಹೆಚ್ಚಿಸಿದ್ದು ಬಿಜೆಪಿಯೇ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೈಲ ಬೆಲೆ ಎಷ್ಟಿದೆ ಎಂಬುದನ್ನು ಸಾರ್ವಜನಿಕರು ಗಮನಿಸಬೇಕು. ಆಡಳಿತ ನಡೆಸುವವರು ತೆರಿಗೆ ಸಂಗ್ರಹ ಮಾಡಬೇಕಲ್ಲವೇ? ಬೆಲೆ ಇಳಿಸಲು ಬಿಜೆಪಿಯ 17 ಸಂಸದರು ಕೇಂದ್ರ ಸರ್ಕಾರದ ಮುಂದೆ ಪ್ರತಿಭಟನೆ ಮಾಡಲಿ ಎಂದು ಹೇಳಿದರು.
ತೆರಿಗೆ ಸಂಗ್ರಹ ಮಾಡುವುದು ಸಹಜ. ಆದರೆ ಅದು ಸಾರ್ವಜನಿಕರಿಗೆ ಹೊರೆಯಾಗಬಾರದು. ನಮ್ಮ ರಾಜ್ಯದ ತೈಲ ಬೆಲೆ ಬೇರೆ ರಾಜ್ಯಗಳಿಗಿಂತ ಕಡಿಮೆ ಇದೆ ಎಂದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…