ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಅವರಿಗೆ ನಾಚಿಕೆಯಾಗಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಜನಸಾಮಾನ್ಯರ ದಿನನಿತ್ಯದ ಸರಕುಗಳ ಮೇಲೆ ಜಿಎಸ್ಟಿ ವಿಧಿಸಿ, ಎಲ್ಲಾ ಅನಿಲಗಳ ದರವನ್ನು ಹೆಚ್ಚಿಸಿದವರು ಬಿಜೆಪಿಯವರೇ. ಈ ಹಿಂದೆ ಪೆಟ್ರೋಲ್ ಬೆಲೆ 70 ರೂ. ಇದ್ದದ್ದನ್ನು ಹೆಚ್ಚಳ ಮಾಡಿದ್ದು ಬಿಜೆಪಿ, ಆಗೆಯೇ ಅಡುಗೆ ಅನಿಲ ಬೆಲೆ 1,200 ರೂ. ಗೆ ಹೆಚ್ಚಿಸಿದ್ದು ಬಿಜೆಪಿಯೇ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೈಲ ಬೆಲೆ ಎಷ್ಟಿದೆ ಎಂಬುದನ್ನು ಸಾರ್ವಜನಿಕರು ಗಮನಿಸಬೇಕು. ಆಡಳಿತ ನಡೆಸುವವರು ತೆರಿಗೆ ಸಂಗ್ರಹ ಮಾಡಬೇಕಲ್ಲವೇ? ಬೆಲೆ ಇಳಿಸಲು ಬಿಜೆಪಿಯ 17 ಸಂಸದರು ಕೇಂದ್ರ ಸರ್ಕಾರದ ಮುಂದೆ ಪ್ರತಿಭಟನೆ ಮಾಡಲಿ ಎಂದು ಹೇಳಿದರು.
ತೆರಿಗೆ ಸಂಗ್ರಹ ಮಾಡುವುದು ಸಹಜ. ಆದರೆ ಅದು ಸಾರ್ವಜನಿಕರಿಗೆ ಹೊರೆಯಾಗಬಾರದು. ನಮ್ಮ ರಾಜ್ಯದ ತೈಲ ಬೆಲೆ ಬೇರೆ ರಾಜ್ಯಗಳಿಗಿಂತ ಕಡಿಮೆ ಇದೆ ಎಂದರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…