ರಾಜ್ಯ

ತೈಲ ಬೆಲೆ ಏರಿಕೆ; ಸೋಲಿನಿಂದಾಗಿ ಜನರ ಮೇಲೆ ಸೇಡು: ಆರ್.‌ ಅಶೋಕ್‌

ಬೆಂಗಳೂರು: ಕಾಂಗ್ರೆಸ್‌ ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ರಾಜ್ಯದಲ್ಲಿ ತೈಲ ಬೆಲೆಯನ್ನು ಏರಿಕೆ ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು.

ಅವರು ಇಂದು(ಜೂ.16) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಕೂಟರ್ ಶವ ಯಾತ್ರೆ ಮಾಡಿದ್ದರು. 15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ್ದಾರೆ ಎಂದು ಹೇಳಿದರು.

ಗ್ಯಾರಂಟಿಗಾಗಿ ₹55,000 ಕೋಟಿ ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ‌. ಹೊರೆ ಹಾಕಿ ತೈಲ ದರ ಏರಿಸಲಾಗಿದೆ. ಇದರಿಂದ ಸಹಜವಾಗಿ ತರಕಾರಿ, ಹಾಲು, ಹಣ್ಣು, ಕೊನೆಗೆ ಟೀ ಕಾಫಿಗೂ ದರ ಏರಲಿದೆ. ನಾಳೆಯಿಂದಲೇ ಆಟೊರಿಕ್ಷಾದವರು, ಗೂಡ್ಸ್ ಗಾಡಿಗಳು ದರ ಏರಿಕೆ ಮಾಡುತ್ತಾರೆ. ಜನರು ಮತ ನೀಡಿಲ್ಲ ಎಂಬ ಕಾರಣಕ್ಕೆ ದರ ಏರಿಸಿದೆ. ಹಿಂದೆ ಬಿಜೆಪಿ ಸರ್ಕಾರ 7 ರೂ. ಕಡಿಮೆ ಮಾಡಿತ್ತು. ಕಾಂಗ್ರೆಸ್‌ಗೆ ಮಾನವಿದ್ದರೆ ದರ ಏರಿಕೆ ವಾಪಾಸ್‌ ಪಡೆಯಲಿ ಎಂದು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

4 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

17 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

17 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

17 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

17 hours ago