ಬೆಂಗಳೂರು: ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ರಾಜ್ಯದಲ್ಲಿ ತೈಲ ಬೆಲೆಯನ್ನು ಏರಿಕೆ ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು.
ಅವರು ಇಂದು(ಜೂ.16) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಕೂಟರ್ ಶವ ಯಾತ್ರೆ ಮಾಡಿದ್ದರು. 15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ್ದಾರೆ ಎಂದು ಹೇಳಿದರು.
ಗ್ಯಾರಂಟಿಗಾಗಿ ₹55,000 ಕೋಟಿ ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ. ಹೊರೆ ಹಾಕಿ ತೈಲ ದರ ಏರಿಸಲಾಗಿದೆ. ಇದರಿಂದ ಸಹಜವಾಗಿ ತರಕಾರಿ, ಹಾಲು, ಹಣ್ಣು, ಕೊನೆಗೆ ಟೀ ಕಾಫಿಗೂ ದರ ಏರಲಿದೆ. ನಾಳೆಯಿಂದಲೇ ಆಟೊರಿಕ್ಷಾದವರು, ಗೂಡ್ಸ್ ಗಾಡಿಗಳು ದರ ಏರಿಕೆ ಮಾಡುತ್ತಾರೆ. ಜನರು ಮತ ನೀಡಿಲ್ಲ ಎಂಬ ಕಾರಣಕ್ಕೆ ದರ ಏರಿಸಿದೆ. ಹಿಂದೆ ಬಿಜೆಪಿ ಸರ್ಕಾರ 7 ರೂ. ಕಡಿಮೆ ಮಾಡಿತ್ತು. ಕಾಂಗ್ರೆಸ್ಗೆ ಮಾನವಿದ್ದರೆ ದರ ಏರಿಕೆ ವಾಪಾಸ್ ಪಡೆಯಲಿ ಎಂದು ಆಗ್ರಹಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…