ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವರ್ಷ ಫೆಬ್ರವರಿಯಲ್ಲೇ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿ ದಾಖಲಾಗುತ್ತಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಉಷ್ಣಾಂಶದ ತೀವ್ರತೆ ಹೆಚ್ಚಿದೆ.
ಮಾರ್ಚ್ನಿಂದ ಮೇ 2026ರ ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಹೆಚ್ಚಿನ ತಾಪಮಾನ ಇರಲಿದೆ. ಉತ್ತರ ಕರ್ನಾಟಕದಲ್ಲಿ ತೀವ್ರ ಶಾಖದ ಅಲೆ ಉಂಟಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಬಿಸಿಲಿನ ಬೇಗೆಯಿಂದ ಉಂಟಾಗಬಹುದಾದ ಶಾಖಾಘಾತ ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಈ ಕೆಳಗಿನ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಏನು ಮಾಡಬೇಕು?
೧) ಸಡಿಲವಾದ, ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಿ. ಗಾಳಿಯಾಡುವಂತಹ ಪಾದರಕ್ಷೆಗಳನ್ನು ಬಳಸಿ
೨) ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಕುಡಿಯಿರಿ. ಉಪ್ಪು-ಸಕ್ಕರೆ ಮಿಶ್ರಿತ ನೀರು, ಹಣ್ಣಿನ ರಸ, ಮಜ್ಜಿಗೆ, ಎಳೆನೀರು ಮತ್ತು ಪಾನಕಗಳಿಗೆ ಆದ್ಯತೆ ನೀಡಿ.
೩) ಮನೆಯಲ್ಲಿ ತಯಾರಿಸಿದ ತಾಜಾ, ಸಾತ್ವಿಕ ಮತ್ತು ಕಡಿಮೆ ಮಸಾಲೆಯುಕ್ತ ಆಹಾರ ಸೇವಿಸಿ
೪) ಹೊರಗಡೆ ಹೋಗುವಾಗ ಕುಡಿಯುವ ನೀರಿನ ಬಾಟಲಿಯನ್ನು ತಪ್ಪದೇ ಜೊತೆಯಲ್ಲಿಟ್ಟುಕೊಳ್ಳಿ
ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ತುರ್ತು ಕ್ರಮಗಳು:
ಯಾರಾದರೂ ಬಿಸಿಲಿನಿಂದಾಗಿ ಪ್ರಜ್ಞೆ ತಪ್ಪಿದರೆ ಅಥವಾ ಅಸಂಬದ್ಧವಾಗಿ ಮಾತನಾಡುತ್ತಿದ್ದರೆ ತಕ್ಷಣ ಈ ಕ್ರಮ ಕೈಗೊಳ್ಳಿ
೧) ವ್ಯಕ್ತಿಯನ್ನು ತಕ್ಷಣ ನೆರಳಿರುವ ತಂಪಾದ ಜಾಗಕ್ಕೆ ಸ್ಥಳಾಂತರಿಸಿ
೨) ಕಾಲುಗಳನ್ನು ಸ್ವಲ್ಪ ಎತ್ತರದಲ್ಲಿರಿಸಿ ಮಲಗಿಸಿ ಮತ್ತು ಬಟ್ಟೆಗಳನ್ನು ಸಡಿಲಗೊಳಿಸಿ
೩) ಹಣೆ, ಕತ್ತು ಮತ್ತು ಪಾದಗಳನ್ನು ಸಾಮಾನ್ಯ ನೀರಿನಿಂದ ಒರೆಸಿ
೪) ಪರಿಸ್ಥಿತಿ ಗಂಭೀರವಾಗಿದ್ದರೆ ತಕ್ಷಣ ಆಂಬುಲೆನ್ಸ್ಗೆ ಕರೆ ಮಾಡಿ ಅಥವಾ ವೈದ್ಯರನ್ನು ಸಂಪರ್ಕಿಸಿ
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…