ರಾಜ್ಯ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವರ್ಷ ಫೆಬ್ರವರಿಯಲ್ಲೇ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿ ದಾಖಲಾಗುತ್ತಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಉಷ್ಣಾಂಶದ ತೀವ್ರತೆ ಹೆಚ್ಚಿದೆ.

ಮಾರ್ಚ್‌ನಿಂದ ಮೇ 2026ರ ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಹೆಚ್ಚಿನ ತಾಪಮಾನ ಇರಲಿದೆ. ಉತ್ತರ ಕರ್ನಾಟಕದಲ್ಲಿ ತೀವ್ರ ಶಾಖದ ಅಲೆ ಉಂಟಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಬಿಸಿಲಿನ ಬೇಗೆಯಿಂದ ಉಂಟಾಗಬಹುದಾದ ಶಾಖಾಘಾತ ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಈ ಕೆಳಗಿನ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.

ಬಿಸಿಲಿನಿಂದ ರಕ್ಷಿಸಿಕೊಳ್ಳಲು ಏನು ಮಾಡಬೇಕು?
೧) ಸಡಿಲವಾದ, ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಿ. ಗಾಳಿಯಾಡುವಂತಹ ಪಾದರಕ್ಷೆಗಳನ್ನು ಬಳಸಿ
೨) ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಕುಡಿಯಿರಿ. ಉಪ್ಪು-ಸಕ್ಕರೆ ಮಿಶ್ರಿತ ನೀರು, ಹಣ್ಣಿನ ರಸ, ಮಜ್ಜಿಗೆ, ಎಳೆನೀರು ಮತ್ತು ಪಾನಕಗಳಿಗೆ ಆದ್ಯತೆ ನೀಡಿ.
೩) ಮನೆಯಲ್ಲಿ ತಯಾರಿಸಿದ ತಾಜಾ, ಸಾತ್ವಿಕ ಮತ್ತು ಕಡಿಮೆ ಮಸಾಲೆಯುಕ್ತ ಆಹಾರ ಸೇವಿಸಿ
೪) ಹೊರಗಡೆ ಹೋಗುವಾಗ ಕುಡಿಯುವ ನೀರಿನ ಬಾಟಲಿಯನ್ನು ತಪ್ಪದೇ ಜೊತೆಯಲ್ಲಿಟ್ಟುಕೊಳ್ಳಿ

ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ತುರ್ತು ಕ್ರಮಗಳು:

ಯಾರಾದರೂ ಬಿಸಿಲಿನಿಂದಾಗಿ ಪ್ರಜ್ಞೆ ತಪ್ಪಿದರೆ ಅಥವಾ ಅಸಂಬದ್ಧವಾಗಿ ಮಾತನಾಡುತ್ತಿದ್ದರೆ ತಕ್ಷಣ ಈ ಕ್ರಮ ಕೈಗೊಳ್ಳಿ

೧) ವ್ಯಕ್ತಿಯನ್ನು ತಕ್ಷಣ ನೆರಳಿರುವ ತಂಪಾದ ಜಾಗಕ್ಕೆ ಸ್ಥಳಾಂತರಿಸಿ
೨) ಕಾಲುಗಳನ್ನು ಸ್ವಲ್ಪ ಎತ್ತರದಲ್ಲಿರಿಸಿ ಮಲಗಿಸಿ ಮತ್ತು ಬಟ್ಟೆಗಳನ್ನು ಸಡಿಲಗೊಳಿಸಿ
೩) ಹಣೆ, ಕತ್ತು ಮತ್ತು ಪಾದಗಳನ್ನು ಸಾಮಾನ್ಯ ನೀರಿನಿಂದ ಒರೆಸಿ
೪) ಪರಿಸ್ಥಿತಿ ಗಂಭೀರವಾಗಿದ್ದರೆ ತಕ್ಷಣ ಆಂಬುಲೆನ್ಸ್‌ಗೆ ಕರೆ ಮಾಡಿ ಅಥವಾ ವೈದ್ಯರನ್ನು ಸಂಪರ್ಕಿಸಿ

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

7 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 mins ago