ರಾಜ್ಯ

ಗನ್‌ ತೋರಿಸಿ 8 ಕೋಟಿ ನಗದು,50ಕೆಜಿ ಚಿನ್ನ ದರೋಡೆ

ವಿಜಯಪುರ : ನೆರೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಂಗಳವಾರ ಸಂಜೆ ೭ ಗಂಟೆಗೆ ಏಳೆಂಟು ಮುಸುಕುದಾರಿ ದರೋಡೆಕೋರರು ಪಿಸ್ತೂಲ್ ಮತ್ತು ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕಿನ ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ.

ಅಂದಾಜು ರೂ. ೮ ಕೋಟಿ ನಗದು, ೫೦ ಕೆ.ಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಬ್ಯಾಂಕಿನ ಸಿಬ್ಬಂದಿ, ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಆದರೆ, ಖಚಿತ ಮಾಹಿತಿ ಇನ್ನೂ ಲಭಿಸಿಲ್ಲ. ಚಡಚಣ ಪಟ್ಟಣದ ಪಂಢರಪುರ ಮುಖ್ಯರಸ್ತೆಯಲ್ಲಿರುವ ಜನ ನಿಬಿಡ ಪ್ರದೇಶದಲ್ಲಿರುವ ಎಸ್‌ಬಿಐ ಶಾಖೆಯ ಸಿಬ್ಬಂದಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಅಣಿಯಾಗುತ್ತಿದ್ದ ವೇಳೆ ಮಿಲಿಟರಿ ಬಣ್ಣದ ಬಟ್ಟೆ ಧರಿಸಿದ್ದ ದರೋಡೆಕೋರರು ಬ್ಯಾಂಕಿನ ಮುಖ್ಯ ದ್ವಾರದ ಮೂಲಕ ಪ್ರವೇಶಿಸಿದ್ದಾರೆ. ನಾಡ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ, ಬ್ಯಾಂಕ್ ವ್ಯವಸ್ಥಾಪಕ ಮತ್ತು ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿ, ದರೋಡೆ ಮಾಡಿದ್ದಾರೆ. ದರೋಡೆಕೋರರು ಘಟನೆ ಬಳಿಕ ಕದ್ದ ಚಿನ್ನಾಭರಣವನ್ನು ವಾಹನಗಳಲ್ಲಿ ಹೇರಿಕೊಂಡು ಮಹಾರಾಷ್ಟ್ರದತ್ತ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಅಽಕಾರಿಗಳು ಭೇಟಿ ನೀಡಿದ್ದು, ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

1 hour ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

1 hour ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

1 hour ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

2 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

2 hours ago