ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು.
ಅವರ ಜನ್ಮದಿನದ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ ಸನಿಹದಲ್ಲಿ ಸಮಾರಂಭವನ್ನು ಏರ್ಪಡಿಸಿದ್ದರು. ಅಲ್ಲಿಗೆ ಬಂದಿದ್ದ ರಾಬರ್ಟ್ ವಾದ್ರಾ ಕೃಷ್ಣಮಂದಿರಕ್ಕೂ ಭೇಟಿ ನೀಡಿದರು.
ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನ, ಶ್ರೀಕೃಷ್ಣದೇವರ ಹಾಗೂ ಶ್ರೀ ಮುಖ್ಯ ಪ್ರಾಣ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.




