ರಾಜ್ಯ

ರೈತರ ಹಿತ ಕಾಯುವಲ್ಲಿ ಬೆಲೆ ಆಯೋಗದ ಪಾತ್ರ ಮುಖ್ಯ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವಲ್ಲಿ ಕೇಂದ್ರ ಕೃಷಿ ಬೆಲೆ ಆಯೋಗದ ಪಾತ್ರ ಬಹಳ‌ ಮಹತ್ವವಾದದ್ದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.

ಕೇಂದ್ರ ಸರ್ಕಾರದ‌ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ
ʼಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿʼ 2025-26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಬೆಳೆಯುವ ಬೆಳೆಗಳಿಗೆ ಉತ್ಪಾದನಾ ವೆಚ್ಚ ಹಾಗೂ ಸಾಗಾಟ, ಮಾರಾಟ ವೆಚ್ಚ ಪರಿಗಣಿಸಿ ವೈಜ್ಞಾನಿಕವಾದ ಬೆಂಬಲ ಬೆಲೆ ನಿಗದಿಯಾಗಬೇಕು, ಡಾ ಸ್ವಾಮಿನಾಥನ್ ಅವರ ವರದಿ ಜಾರಿಯಾಗಬೇಕು ಎಂದು ಸಚಿವರು ಹೇಳಿದರು.

ಜಾಗತಿಕ ಕೃಷಿಯಲ್ಲಿ ಭಾರತ ದೇಶ ಮತ್ತು ಕರ್ನಾಟಕ ರಾಜ್ಯದ ಪಾತ್ರ ಮಹತ್ವದ್ದು. ಅನೇಕ ಏಳು ಬೀಳುಗಳ ನಡುವೆಯೂ ನಾವು ಸ್ಥಿರತೆ ಕಂಡುಕೊಂಡಿದ್ದೇವೆ. ಕಳೆದ ಎರಡು ದಶಕಗಳಲ್ಲಿ ಬಹುತೇಕ ವರ್ಷ ಬರ, ಕೆಲ ವರ್ಷ ಅತಿವೃಷ್ಟಿ ನಮ್ಮನ್ನು ಕಾಡಿದೆ. ಬೆಳೆದ ಬೆಳೆ ಕೈ ಸೇರುತ್ತಿಲ್ಲ, ಇಂತಹ ಸಂದರ್ಭಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕರಗಳೆರೆಡೂ ರೈತರ ಸಂಕಷ್ಟಕ್ಕೆ ‌ಇನ್ನಷ್ಟು ಹೆಚ್ಚು ಸ್ಪಂದಿಸಿ ನೆರವಾಗಬೇಕಿದೆ ಎಂದು ಎನ್.ಚಲುವರಾಯಸ್ವಾಮಿ ಹೇಳಿದರು.

ರಾಜ್ಯ ಸರ್ಕಾರ ರೈತರ ಹಿತ ಕಾಯಲು ಅನೇಕ ಪ್ರಮುಖ ಯೋಜನೆ ರೂಪಿಸಿ ಜಾರಿಗೊಳಿಸಿದೆ. ಇದನ್ನು ತಲುಪಿಸುವಲ್ಲಿ ಅಧಿಕಾರಿಗಳ ಜವಾಬ್ದಾರಿ ದೊಡ್ಡದು ಎಂದರು.

ಸುಸ್ಥಿರ ಕೃಷಿಗೆ ಬೆಲೆ ಸ್ಥಿರೀಕರಣದ ಜೊತೆಗೆ ಉತ್ಪಾದನೆ, ಮಾರಾಟವೆಚ್ಚದಲ್ಲಿ ಕಡಿತ ಮುಖ್ಯವಾಗಿದೆ .ಇದಕ್ಕೆ ತಂತ್ರಜ್ಞಾನ, ಯಾಂತ್ರೀಕರಣಗಳ ವರ್ಗಾವಣೆ ಜೊತೆಗೆ ವಿಶ್ವ ವಿದ್ಯಾನಿಲಯಗಳ ಸಂಶೋಧನೆಗಳು ಸುಲಭವಾಗಿ ಕೃಷಿಕರ ನೆಲ ತಲುಪಬೇಕು ಎಂದು ಅವರು ಹೇಳಿದರು.

ದಕ್ಷಿಣ ಭಾರತದ ಐದು ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು,ಆಂದ್ರ ಪ್ರದೇಶ ,ತೆಲೆಂಗಾಣ ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಕೃಷಿ ಬೆಲೆ ಆಯೋಗದ ಸದಸ್ಯರಾದ ಡಾ. ನವೀನ್ ಪ್ರಕಾಶ್ ಸಿಂಗ್, ರತನ್ ಲಾಲ್ ಡಗ, ಅನುಪಮ್ ಮಿತ್ರ, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್, ನಿರ್ದೇಶಕರಾದ ಡಾ ಜಿ.ಟಿ ಪುತ್ರ ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

6 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

7 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

7 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

8 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

9 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

9 hours ago