ರಾಜ್ಯ

ರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣ: ಮಾಜಿ ಸಚಿವ ಭೈರತಿ ಬಸವರಾಜ್‌ ಹೆಸರು ತಳುಕು

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್‌ ಹೆಸರು ತಳುಕು ಹಾಕಿಕೊಂಡಿದ್ದು, ಮೃತನ ತಾಯಿ ವಿಜಯಲಕ್ಷ್ಮೀ ನೀಡಿರುವ ದೂರಿನ ಮೇರೆಗೆ ಭೈರತಿ ಬಸವರಾಜ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಭಾರತೀನಗರ ಠಾಣೆಯಲ್ಲಿ ಭೈರತಿ ಬಸವರಾಜ್‌ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಭೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಿತ್ತನೂರು ಜಾಗದ ವಿಚಾರವಾಗಿ ರೌಡಿಶೀಟರ್‌ ಶಿವಪ್ರಕಾಶ್‌ ಕೊಲೆ ಮಾಡಲಾಗಿದೆ. ಕಾರಿನಲ್ಲಿ ಬಂದಿದ್ದ 8-9 ಜನರು ಶಿವಪ್ರಕಾಶ್‌ಗೆ ಬೆದರಿಕೆ ಹಾಕಿದ್ದರು. ಭೈರತಿ ಬಸವರಾಜ್‌ ಸೇರಿದಂತೆ ಹಲವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಲವು ಬಾರಿ ಮಗ ಹೇಳುತ್ತಿದ್ದ ಎಂದು ತಾಯಿ ವಿಜಯಲಕ್ಷ್ಮೀ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇನ್ನು ಈ ಪ್ರಕರಣ ಸಂಬಂಧ ಮಾತನಾಡಿರುವ ಮಾಜಿ ಸಚಿವ ಭೈರತಿ ಬಸವರಾಜ್‌ ಅವರು, ರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆತ ಯಾರೆಂಬುದೂ ನನಗೆ ಗೊತ್ತಿಲ್ಲ. ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಲಾಗಿದೆ. ಸುಖಾ‌ ಸುಮ್ಮನೆ ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ. ಯಾರೋ ದೂರು ನೀಡಿದರು ಎಂದ ಮಾತ್ರಕ್ಕೆ ಎಫ್‌ಐಆರ್‌ ದಾಖಲಿಸಬಹುದಾ? ಎಫ್‌ಐಆರ್‌ ದಾಖಲಿಸುವಾಗ ನನಗೆ ಮಾಹಿತಿ ಕೂಡ ನೀಡಿಲ್ಲ. ಈ ನಿಟ್ಟಿನಲ್ಲಿ ನಾನು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

2 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

5 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

9 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

11 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

13 hours ago