ರಾಜ್ಯ

ಕೈದಿಗಳಿಗೆ ರಾಜಾತಿಥ್ಯ : ಜೈಲಿನ ಮೂವರು ಹಿರಿಯ ಅಧಿಕಾರಿಗಳ ತಲೆತಂಡ

ಬೆಂಗಳೂರು : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿರುವುದು ಹಾಗೂ ಶಂಕಿತ ಭಯೋತ್ಪಾದಕನಿಗೆ ಸ್ಯಾಟ್‍ಲೈಟ್ ಫೋನ್ ಬಳಕೆ ಪ್ರಕರಣದಲ್ಲಿ ಒಬ್ಬರನ್ನು ಎತ್ತಂಗಡಿ ಮಾಡಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ‌

ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದರೆ ಜೈಲಿನ ಮುಖ್ಯ ಅಧೀಕ್ಷ, ಜೈಲು ಮುಖ್ಯ ಅಧೀಕ್ಷಕ- ಸುರೇಶ್ ಎತ್ತಂಗಡಿಯಾಗಿದ್ದರೆ, ಜೈಲು ಅಧೀಕ್ಷಕ ಮಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಸೇವೆಯಿಂದ ಅಮಾನತುಪಡಿಸಲಾಗಿದೆ.

ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮರುಕಳಿಸುತ್ತಿರುವ ಈ ಪ್ರಕರಣಗಳ ಬಗ್ಗೆ ಕೂಲಂಕುಷ ತನಿಖೆಗೆ ನಡೆಸಿ ಒಂದು ತಿಂಗಳೊಳಗೆ ಸಮಗ್ರ ವರದಿ ನೀಡುವಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೆಂದ್ರ ನೇತೃತ್ವದಲ್ಲಿ ನಾಲ್ವರು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಲಾಗಿದೆ.

ಇದನ್ನು ಓದಿ: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ಬಿಡುಗಡೆ ಪ್ರಕರಣ: ನಟ ದರ್ಶನ್‌ ಆಪ್ತ ಧನ್ವೀರ್‌ ಸಿಸಿಬಿ ವಶಕ್ಕೆ

ಸೋಮವಾರ ಗೃಹಸಚಿವ ಪರಮೇಶ್ವರ್ ಅವರು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈ ವಿಡಿಯೋಗಳು ಹೊರಬಂದ ನಂತರ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಹುಟ್ಟಿದೆ. ಜೈಲುಗಳು ಶಿಕ್ಷೆಯ ಸ್ಥಳವಲ್ಲ, ಅಪರಾಧಿಗಳಿಗೆ ಐಷಾರಾಮಿ ಜೀವನ ನಡೆಸುವ ಸ್ಥಳವಲ್ಲ ಎಂದು ಜನರು ಖಂಡಿಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರು ಇತ್ತೀಚೆಗೆ ಹಿರಿಯ ಜೈಲು ಅಧಿಕಾರಿಗಳ ಸಭೆ ಕರೆದು ತೀವ್ರ ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ವೈರಲ್ ಆಗಿರುವ ಫೋಟೋಗಳು ಮತ್ತು ವಿಡಿಯೋಗಳನ್ನು ಪ್ರೊಜೆಕ್ಟರ್ ಮೂಲಕ ಪ್ರದರ್ಶಿಸಿ, ಅಧಿಕಾರಿಗಳಿಂದ ವಿವರಣೆ ಕೇಳಿದರು. ಈ ರೀತಿಯ ಅಕ್ರಮಗಳಿಗೆ ನಿರ್ಲಕ್ಷ್ಯ ಮಾಡಬಾರದು. ಜೈಲುಗಳು ದೇಶದ ಭದ್ರತೆಗೆ ಧಕ್ಕೆ ತರುವ ಸ್ಥಳವಾಗಬಾರದು ಎಂದು ಒತ್ತಿ ಹೇಳಿದರು.

ಎಲ್ಲಾ ಜೈಲುಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಅವುಗಳನ್ನು ಕೇಂದ್ರ ಕಚೇರಿಗೆ ಸಂಪರ್ಕಿಸಿ ಅವನ್ನು ನಿಗಾವಹಿಸಲು ಬಂಧಿಖಾನೆ ಇಲಾಕೆಯ ಎಡಿಜಿಪಿ ಕಚೇರಿಯಲ್ಲಿ ಕಮ್ಯಾಂಡಿಂಗ್ ಸೆಂಟರ್‍ನ್ನು ಸ್ಥಾಪಿಸಲಾಗುವುದು. ಇದರಿಂದಾಗಿ ಜೈಲಿನ ಚಟುವಟಿಕೆಗಳನ್ನು ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ನೇರವಾಗಿ ವೀಕ್ಷಿಸಬಹುದಾಗಿದೆ. ಈ ವ್ಯವಸ್ಥೆ ರೂಪಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 mins ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

20 mins ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

29 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

43 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

1 hour ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

1 hour ago