ರಾಜ್ಯ

ಕೈದಿಗಳಿಗೆ ರಾಜಾತಿಥ್ಯ : ಜೈಲಿನ ಮೂವರು ಹಿರಿಯ ಅಧಿಕಾರಿಗಳ ತಲೆತಂಡ

ಬೆಂಗಳೂರು : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿರುವುದು ಹಾಗೂ ಶಂಕಿತ ಭಯೋತ್ಪಾದಕನಿಗೆ ಸ್ಯಾಟ್‍ಲೈಟ್ ಫೋನ್ ಬಳಕೆ ಪ್ರಕರಣದಲ್ಲಿ ಒಬ್ಬರನ್ನು ಎತ್ತಂಗಡಿ ಮಾಡಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ‌

ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದರೆ ಜೈಲಿನ ಮುಖ್ಯ ಅಧೀಕ್ಷ, ಜೈಲು ಮುಖ್ಯ ಅಧೀಕ್ಷಕ- ಸುರೇಶ್ ಎತ್ತಂಗಡಿಯಾಗಿದ್ದರೆ, ಜೈಲು ಅಧೀಕ್ಷಕ ಮಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಸೇವೆಯಿಂದ ಅಮಾನತುಪಡಿಸಲಾಗಿದೆ.

ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮರುಕಳಿಸುತ್ತಿರುವ ಈ ಪ್ರಕರಣಗಳ ಬಗ್ಗೆ ಕೂಲಂಕುಷ ತನಿಖೆಗೆ ನಡೆಸಿ ಒಂದು ತಿಂಗಳೊಳಗೆ ಸಮಗ್ರ ವರದಿ ನೀಡುವಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೆಂದ್ರ ನೇತೃತ್ವದಲ್ಲಿ ನಾಲ್ವರು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಲಾಗಿದೆ.

ಇದನ್ನು ಓದಿ: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ಬಿಡುಗಡೆ ಪ್ರಕರಣ: ನಟ ದರ್ಶನ್‌ ಆಪ್ತ ಧನ್ವೀರ್‌ ಸಿಸಿಬಿ ವಶಕ್ಕೆ

ಸೋಮವಾರ ಗೃಹಸಚಿವ ಪರಮೇಶ್ವರ್ ಅವರು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈ ವಿಡಿಯೋಗಳು ಹೊರಬಂದ ನಂತರ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಹುಟ್ಟಿದೆ. ಜೈಲುಗಳು ಶಿಕ್ಷೆಯ ಸ್ಥಳವಲ್ಲ, ಅಪರಾಧಿಗಳಿಗೆ ಐಷಾರಾಮಿ ಜೀವನ ನಡೆಸುವ ಸ್ಥಳವಲ್ಲ ಎಂದು ಜನರು ಖಂಡಿಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರು ಇತ್ತೀಚೆಗೆ ಹಿರಿಯ ಜೈಲು ಅಧಿಕಾರಿಗಳ ಸಭೆ ಕರೆದು ತೀವ್ರ ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ವೈರಲ್ ಆಗಿರುವ ಫೋಟೋಗಳು ಮತ್ತು ವಿಡಿಯೋಗಳನ್ನು ಪ್ರೊಜೆಕ್ಟರ್ ಮೂಲಕ ಪ್ರದರ್ಶಿಸಿ, ಅಧಿಕಾರಿಗಳಿಂದ ವಿವರಣೆ ಕೇಳಿದರು. ಈ ರೀತಿಯ ಅಕ್ರಮಗಳಿಗೆ ನಿರ್ಲಕ್ಷ್ಯ ಮಾಡಬಾರದು. ಜೈಲುಗಳು ದೇಶದ ಭದ್ರತೆಗೆ ಧಕ್ಕೆ ತರುವ ಸ್ಥಳವಾಗಬಾರದು ಎಂದು ಒತ್ತಿ ಹೇಳಿದರು.

ಎಲ್ಲಾ ಜೈಲುಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಅವುಗಳನ್ನು ಕೇಂದ್ರ ಕಚೇರಿಗೆ ಸಂಪರ್ಕಿಸಿ ಅವನ್ನು ನಿಗಾವಹಿಸಲು ಬಂಧಿಖಾನೆ ಇಲಾಕೆಯ ಎಡಿಜಿಪಿ ಕಚೇರಿಯಲ್ಲಿ ಕಮ್ಯಾಂಡಿಂಗ್ ಸೆಂಟರ್‍ನ್ನು ಸ್ಥಾಪಿಸಲಾಗುವುದು. ಇದರಿಂದಾಗಿ ಜೈಲಿನ ಚಟುವಟಿಕೆಗಳನ್ನು ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ನೇರವಾಗಿ ವೀಕ್ಷಿಸಬಹುದಾಗಿದೆ. ಈ ವ್ಯವಸ್ಥೆ ರೂಪಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

16 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

16 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

16 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

16 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

16 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

19 hours ago