ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೆಂಟ್ರಲ್ ಜೈಲು ಸೇರಿರುವ ನಟ ದರ್ಶನ್ ಕುರ್ಚಿ ಮೇಲೆ ಕುಳಿತು ಒಂದು ಕೈಯಲ್ಲಿ ಟೀ ಹೀರುತ್ತಾ, ಸಿಗರೇಟ್ ಸೇದುತ್ತಾ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೊ ಬಹಿರಂಗವಾಗಿದ್ದಾದರೂ ಹೇಗೆ ಎಂಬ ಪ್ರಶ್ನೆ ಜೈಲಿನ ಸಿಬ್ಬಂದಿಯನ್ನು ಕಾಡುತ್ತಿದೆ. ಇದು ಸಾರ್ವಜನಿಕರನ್ನು ಕೂಡ ಕೂತುಹಲಕ್ಕೀಡು ಮಾಡಿದೆ.
ಕೊಲೆ ಆರೋಪಿ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ಹಾಗೂ ದರ್ಶನ್ ಮ್ಯಾನೇಜರ್ ಕುಳಿತಿದ್ದ ಫೋಟೊವನ್ನು ರೌಡಿಶೀಟರ್ ವೇಲು ಎಂಬಾತ ತೆಗೆದಿದ್ದ. ಅದನ್ನು ತನ್ನ ಪತ್ನಿಗೆ ಕಳುಹಿಸಿದ್ದ. ಆಕೆ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದರು. ಬಳಿಕ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಹೀಗೆ ಫೋಟೊ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ ದರ್ಶನ್ಗೆ ರಾಜಾತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದೆ ಆರೋಪ್ ಅಡಿ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…