ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ.
ಬೆಂಗಳೂರು ಜಲಮಂಡಳಿ ಬೇಸಿಗೆ ಕಾಲದಲ್ಲಿ ಆಗುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಈಗಾಗಲೇ ಅಧಿಕಾರಿಗಳ ಸಭೆ ಮಾಡಿದ್ದು, ನೀರಿನ ಸಮಸ್ಯೆ ಆಗುವ ಭಾಗದಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಲು ಪ್ಲ್ಯಾನ್ ಮಾಡಿದೆ.
ಅದರ ಜೊತೆಗೆ ನೀರಿನ ಅಭಾವ ಆಗೋದು ಡೌಟ್. ಒಂದು ವೇಳೆ ನೀರಿನ ಅಭಾವ ಆದರೂ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದಕ್ಕೆ ಜಲಮಂಡಳಿ ಮುಂದಾಗಿದೆ.
ಬೆಂಗಳೂರಿನ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನೀರು ಸದ್ಯ ಕೆಆರ್ಎಸ್ನಲ್ಲಿ 54 ಟಿಎಂಸಿ ನೀರು ಇದೆ. ಜುಲೈವರೆಗೆ ಬೆಂಗಳೂರಿಗೆ 14 ಟಿಎಂಸಿ ನೀರು ಸಾಕಾಗುತ್ತದೆ. ಆದರೆ ಇಡೀ ಬೆಂಗಳೂರಿಗೆ ಕಾವೇರಿಯ ಜೊತೆಗೆ ಬೋರ್ವೆಲ್ ನೀರು ಕೂಡ ಬಹಳ ಪ್ರಮುಖ ಪಾತ್ರವಹಿಸಿದ್ದು, ಬೋರ್ವೆಲ್ನಲ್ಲಿ ಬೇಸಿಗೆಯಲ್ಲಿ ನೀರು ಕಡಿಮೆಯಾಗುವುದು ನಿಶ್ಚಿತ. ಕಳೆದ ವರ್ಷದಿಂದ ಜಲಮಂಡಳಿಯೇ ಸಂಪೂರ್ಣವಾಗಿ ಬೋರ್ವೆಲ್ಗಳ ನಿರ್ವಹಣೆ ಮಾಡ್ತಿದ್ದು, ಅಂತರ್ಜಲ ಕುಸಿಯದಂತೆ ಕ್ರಮ ಕೈಗೊಂಡಿದೆ.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…