ರಾಜ್ಯ

ಸರ್ಕಾರದ ಆದೇಶಕ್ಕೆ ಆರ್‌ಎಸ್‌ಎಸ್ ಸಡ್ಡು : ಚಿತ್ತಾಪುರದಲ್ಲಿ 19 ರಂದು ಬೃಹತ್ ಪಥಸಂಚಲನಕ್ಕೆ ಸಜ್ಜು

ಬೆಂಗಳೂರು : ಸರ್ಕಾರಿ ಸ್ಥಳಗಳು, ಆಟದ ಮೈದಾನ, ಕ್ರೀಡಾಂಗಣಗಳು ಸೇರಿದಂತೆ ಮತ್ತಿತರ ಕಡೆ ಚಟುವಟಿಕೆ ನಡೆಸಲು ಅನುಮತಿ ಅಗತ್ಯ ಎಂದು ಆರ್‌ಎಸ್‌ಎಸ್‌ಗೆ ಪರೋಕ್ಷವಾಗಿ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರದ ವಿರುದ್ಧ ಸಂಘ ಪರಿವಾರ ನೇರಾನೇರ ತೊಡೆತಟ್ಟಿದೆ.

ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಸರ್ಕಾರಿ ಜಾಗಗಳಲ್ಲಿ ನಿಷೇಧ ಹೇರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಇದೇ ೧೯ರಂದು ಬೃಹತ್ ಪಥಸಂಚಲ ನಡೆಸಲಿದೆ.

ವಿಶೇಷವೆಂದರೆ ಸರ್ಕಾರದ ಅನುಮತಿಯನ್ನು ಪಡೆಯಬೇಕೆಂಬ ಪೂರ್ವ ಷರತ್ತನ್ನು ಪಡೆಯದೆ ೧೯ರಂದು ಚಿತ್ತಾರಪುರದಲ್ಲಿ ಸಾವಿರಾರು ಸ್ವಯಂಸೇವಕರು ನಗರದ ಪ್ರಮುಖ ಪಟ್ಟಣಗಳಲ್ಲಿ ಪಥಸಂಚಲನ ನಡೆಸಲಿದ್ದಾರೆ. ಈ ಮೂಲಕ ತವರು ಕ್ಷೇತ್ರದಲ್ಲೇ ಪ್ರಿಯಾಂಕ್ ಖರ್ಗೆ ಸಂಘಪರಿವಾರ ಸಡ್ಡು ಹೊಡೆಯಲಿದೆ.

ಇದನ್ನು ಓದಿ: ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಪಥಸಂಚಲನಕ್ಕೆ ಅಗತ್ಯವಿರುವ ಪೂರ್ವಸಿದ್ದತೆಗಳನ್ನು ರಾಜ್ಯಸಭಾ ಸದಸ್ಯ ನಾರಾಯಣ ಬಾಂಡಗೆ ನೇತೃತ್ವದಲ್ಲಿ ಕೈಗೊಳ್ಳಲಾಗುತ್ತಿದ್ದು, ಅಂದಿನ ಪಥಸಂಚಲನಕ್ಕೆ ಸ್ವಯಂಪ್ರೇರಿತರಾಗಿ ಸಾವಿರಾರು ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ರಾಜ್ಯದಲ್ಲಿ ಯಾವುದೇ ಸಂಘಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ಚಟುವಟಿಕೆಗಳನ್ನು ನಡೆಸಲು ಸರ್ಕಾರದ ಅನುಮತಿ ಅಗತ್ಯ ಎಂಬ ತೀರ್ಮಾನದ ನಂತರ ಮೊದಲ ಬಾರಿಗೆ ನಡೆಯುತ್ತಿರುವ ಪಥಸಂಚನ ಇದಾಗಿದೆ. ಇದೊಂದು ಶಕ್ತಿ ಪ್ರದರ್ಶನವೆಂದೇ ಬಿಂಬಿತವಾಗಿದ್ದು, ಚಿತ್ತಾಪುರದ ಪ್ರಮುಖ ಪಟ್ಟಣಗಳಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪಥಸಂಚಲನವನ್ನು ನಡೆಸಲು ಉದ್ದೇಶಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ರಾಜ್ಯಸಭಾ ಸದಸ್ಯ ನಾರಾಯಣ ಬಾಂಡಗೆ, ನಾವು ಯಾವುದೇ ಅನುಮತಿಯನ್ನು ಪಡೆಯದೇ ಪಥಸಂಚಲನ ನಡೆಸುತ್ತೇವೆ. ಸ್ಥಳೀಯ ಸಂಸ್ಥೆಗಳಿಂದಲೂ ಒಪ್ಪಿಗೆ ಪಡೆಯುವುದಿಲ್ಲ, ಹಿಂದೆಯೂ ಪಡೆದಿಲ್ಲ ಮುಂದೆಯೂ ಪಡೆಯುವುದಿಲ್ಲ. ನೋಡೇ ಬಿಡೋಣ ಏನಾಗುತ್ತದೆ ಎಂದು ಬಹಿರಂಗ ಸವಾಲು ಹಾಕಿದ್ದಾರೆ.

ಬಾಂಡಗೆ ಅವರ ಮಾತಿಗೆ ದನಿಗೂಡಿಸಿರುವ ಬಿಜೆಪಿಯ ಅನೇಕ ನಾಯಕರು, ಒಂದು ಸಮುದಾಯದ ಓಲೈಕೆಗಾಗಿ ಸರ್ಕಾರ ದೇಶಭಕ್ತ ಸಂಘಟನೆಯಾದ ಆರ್‌ಎಸ್‌ಎಸ್‌ಗೆ ಪರೋಕ್ಷವಾಗಿ ಕಡಿವಾಣ ಹಾಕಲು ಮುಂದಾಗಿದ್ದಾರೆ. ನೀವು ಬೆದರಿಕೆ ಹಾಕಿದಷ್ಟು ಆರ್‌ಎಸ್‌ಎಸ್ ಹೆಮ್ಮರವಾಗಿ ಬೆಳೆಯುತ್ತದೆ. ಎಂದು ಬಿಜೆಪಿ ನಾಯಕರು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

6 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

8 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

8 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

9 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

9 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

9 hours ago