ರಾಜ್ಯ

ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್‌ ಭಾಗಿಯಾಗಿರಲಿಲ್ಲ : ಹೆಗೆಡೆ ಆಪಾದನೆ

ಮಂಗಳೂರು : ದೇಶ ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚಿನಲ್ಲಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಶಾಖೆಗಳಲ್ಲಿ ಕಬಡ್ಡಿ ಮೊದಲಾದ ಆಟಗಳನ್ನು ಆಡಿಕೊಂಡು ತಮಗೂ ಇದಕ್ಕೂ ಸಂಬಂಧವಿಲ್ಲದವರಂತೆ ಇದ್ದರು. ಬ್ರಿಟಿಷರ ಆಡಳಿತಕ್ಕೆ ಸಂಪೂರ್ಣವಾಗಿ ಶರಣಾಗಿದ್ದರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ(ಕೆಪಿಸಿಸಿ)ವಕ್ತಾರ ಎಂ.ಜಿ.ಹೆಗಡೆ ಆಪಾದಿಸಿದರು.

ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು ಸ್ವಾತಂತ್ರ ಹೋರಾಟಗಾರರಾದ ಸಾವರ್ಕರ್, ಕೇಳ್ಕರ್, ಮಹಾತ್ಮ ಗಾಂಽ ಅವರನ್ನು ಆರ್‌ಎಸ್‌ಎಸ್‌ನವರು ಬೆಂಬಲಿಸಲಿಲ್ಲ. ಬ್ರಿಟಿಷರ ಎಲ್ಲ ಕಾನೂನುಗಳನ್ನೂ ಆರ್‌ಎಸ್‌ಎಸ್ ಗೌರವಿಸಿತ್ತು ಎಂದು ದೂರಿದರು.

‘ಎದ್ದು ನಿಲ್ಲು ವೀರ ದೇಶ ಕಾದಿದೆ’ ಮೊದಲಾದ ಆರ್ ಎಸ್‌ಎಸ್ ಗೀತೆಗಳು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರಚನೆಯಾಗಿವೆ ಹೊರತು ಸ್ವಾತಂತ್ರ್ಯ ಪೂರ್ವದಲ್ಲಿ ರಚನೆಯಾಗಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ:-ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ಗೆ ತಿಂಗಳಿಗೊಮ್ಮೆ ಹೊದಿಕೆ, ಬಟ್ಟೆ ನೀಡಲು ಕೋರ್ಟ್ ಆದೇಶ

ಆರ್‌ಎಸ್‌ಎಸ್ ಸಂಘಟನೆಯಿಂದ ಗುರು ಪೌರ್ಣಮಿಯಂದು ಸಂಗ್ರಹವಾಗುವ ಗುರು ದಕ್ಷಿಣೆಯ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಆದಾಯ ತೆರಿಗೆ ಇಲಾಖೆ ನಿಯಮದ ಪ್ರಕಾರ ೫೦ ಸಾವಿರ ರೂ. ಗಿಂತ ಹೆಚ್ಚು ದೇಣಿಗೆ ಸಂಗ್ರಹವಾದರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕು. ವಿವಿಧ ಮೂಲಗಳಿಂದ ಬರುವ ಆದಾಯದ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿಯನ್ನೂ ನೀಡುತ್ತಿಲ್ಲ. ಇದು ಕಾನೂನು ಬಾಹಿರವಾಗಿದೆ ಎಂದು ಹೇಳಿದರು.

ಆರ್‌ಎಸ್‌ಎಸ್ ಸಂಘಟನೆಯ ೭೦ಕ್ಕೂ ಹೆಚ್ಚು ಅಂಗ ಸಂಸ್ಥೆಗಳು ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿ ನೋಂದಣಿಯಾಗಿವೆ. ಆದರೆ ೧೦೦ ವರ್ಷದ ಇತಿಹಾಸವನ್ನು ಹೊಂದಿರುವ ಸಂಘಟನೆ ಭಾರತದಲ್ಲಿ ಏಕೆ ನೋಂದಣಿಯಾಗಿಲ್ಲ ಎಂದು ಪ್ರಶ್ನಿಸಿದರು.

ಸರ್ಕಾರದ ಕಾನೂನಿನ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘಟನೆ ಕಾರ್ಯಕ್ರಮನಡೆಸಬೇಕಾದರೆ ಸರ್ಕಾರದ ಪೂರ್ವನುಮತಿ ಪಡೆಯುವುದು ಕಡ್ಡಾಯ ಆದರೆ ಆರ್‌ಎಸ್‌ಎಸ್‌ನವರು ಹಲವಾರು ವರ್ಷಗಳಿಂದ ಸರ್ಕಾರಿ, ಅನುದಾನಿತ ಶಾಲೆ ಕಾಲೇಜುಗಳ ಮೈದಾನವನ್ನು ಸಂಘದ ಶಾಖೆಗಳನ್ನು ನಡೆಸಲು ಬಳಸುತ್ತಿರುವುದು ಕಾನೂನು ಬಾಹಿರವಾಗಿದೆ. ಹಾಗಾದರೆ ಕೇಂದ್ರ ಸರ್ಕಾರಿ ಸ್ವಾಮ್ಯದ ಏರ್ ಪೋರ್ಟ್ ಹಾಗೂ ರೈಲ್ವೆ ನಿಲ್ದಾಣಗಳ ಬಳಿ ಶಾಖೆಗಳನ್ನು ಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರಿ ಸ್ವಾಮ್ಯದ ಸ್ಥಳಗಲ್ಲಿ ಬೇರೆ ಸಂಘಟನೆಗಳು ಅನುಮತಿ ಪಡೆಯದೆ ಸಭೆ, ಸಮಾರಂಭಗಳನ್ನು ನಡೆಸಲು ಅನುಮತಿ ನೀಡುತ್ತಾರೆಯೇ ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

3 hours ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

3 hours ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

3 hours ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

3 hours ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

3 hours ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

3 hours ago