ರಾಜ್ಯ

ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್‌ ಭಾಗಿಯಾಗಿರಲಿಲ್ಲ : ಹೆಗೆಡೆ ಆಪಾದನೆ

ಮಂಗಳೂರು : ದೇಶ ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚಿನಲ್ಲಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಶಾಖೆಗಳಲ್ಲಿ ಕಬಡ್ಡಿ ಮೊದಲಾದ ಆಟಗಳನ್ನು ಆಡಿಕೊಂಡು ತಮಗೂ ಇದಕ್ಕೂ ಸಂಬಂಧವಿಲ್ಲದವರಂತೆ ಇದ್ದರು. ಬ್ರಿಟಿಷರ ಆಡಳಿತಕ್ಕೆ ಸಂಪೂರ್ಣವಾಗಿ ಶರಣಾಗಿದ್ದರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ(ಕೆಪಿಸಿಸಿ)ವಕ್ತಾರ ಎಂ.ಜಿ.ಹೆಗಡೆ ಆಪಾದಿಸಿದರು.

ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು ಸ್ವಾತಂತ್ರ ಹೋರಾಟಗಾರರಾದ ಸಾವರ್ಕರ್, ಕೇಳ್ಕರ್, ಮಹಾತ್ಮ ಗಾಂಽ ಅವರನ್ನು ಆರ್‌ಎಸ್‌ಎಸ್‌ನವರು ಬೆಂಬಲಿಸಲಿಲ್ಲ. ಬ್ರಿಟಿಷರ ಎಲ್ಲ ಕಾನೂನುಗಳನ್ನೂ ಆರ್‌ಎಸ್‌ಎಸ್ ಗೌರವಿಸಿತ್ತು ಎಂದು ದೂರಿದರು.

‘ಎದ್ದು ನಿಲ್ಲು ವೀರ ದೇಶ ಕಾದಿದೆ’ ಮೊದಲಾದ ಆರ್ ಎಸ್‌ಎಸ್ ಗೀತೆಗಳು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರಚನೆಯಾಗಿವೆ ಹೊರತು ಸ್ವಾತಂತ್ರ್ಯ ಪೂರ್ವದಲ್ಲಿ ರಚನೆಯಾಗಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ:-ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ಗೆ ತಿಂಗಳಿಗೊಮ್ಮೆ ಹೊದಿಕೆ, ಬಟ್ಟೆ ನೀಡಲು ಕೋರ್ಟ್ ಆದೇಶ

ಆರ್‌ಎಸ್‌ಎಸ್ ಸಂಘಟನೆಯಿಂದ ಗುರು ಪೌರ್ಣಮಿಯಂದು ಸಂಗ್ರಹವಾಗುವ ಗುರು ದಕ್ಷಿಣೆಯ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಆದಾಯ ತೆರಿಗೆ ಇಲಾಖೆ ನಿಯಮದ ಪ್ರಕಾರ ೫೦ ಸಾವಿರ ರೂ. ಗಿಂತ ಹೆಚ್ಚು ದೇಣಿಗೆ ಸಂಗ್ರಹವಾದರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕು. ವಿವಿಧ ಮೂಲಗಳಿಂದ ಬರುವ ಆದಾಯದ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿಯನ್ನೂ ನೀಡುತ್ತಿಲ್ಲ. ಇದು ಕಾನೂನು ಬಾಹಿರವಾಗಿದೆ ಎಂದು ಹೇಳಿದರು.

ಆರ್‌ಎಸ್‌ಎಸ್ ಸಂಘಟನೆಯ ೭೦ಕ್ಕೂ ಹೆಚ್ಚು ಅಂಗ ಸಂಸ್ಥೆಗಳು ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿ ನೋಂದಣಿಯಾಗಿವೆ. ಆದರೆ ೧೦೦ ವರ್ಷದ ಇತಿಹಾಸವನ್ನು ಹೊಂದಿರುವ ಸಂಘಟನೆ ಭಾರತದಲ್ಲಿ ಏಕೆ ನೋಂದಣಿಯಾಗಿಲ್ಲ ಎಂದು ಪ್ರಶ್ನಿಸಿದರು.

ಸರ್ಕಾರದ ಕಾನೂನಿನ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘಟನೆ ಕಾರ್ಯಕ್ರಮನಡೆಸಬೇಕಾದರೆ ಸರ್ಕಾರದ ಪೂರ್ವನುಮತಿ ಪಡೆಯುವುದು ಕಡ್ಡಾಯ ಆದರೆ ಆರ್‌ಎಸ್‌ಎಸ್‌ನವರು ಹಲವಾರು ವರ್ಷಗಳಿಂದ ಸರ್ಕಾರಿ, ಅನುದಾನಿತ ಶಾಲೆ ಕಾಲೇಜುಗಳ ಮೈದಾನವನ್ನು ಸಂಘದ ಶಾಖೆಗಳನ್ನು ನಡೆಸಲು ಬಳಸುತ್ತಿರುವುದು ಕಾನೂನು ಬಾಹಿರವಾಗಿದೆ. ಹಾಗಾದರೆ ಕೇಂದ್ರ ಸರ್ಕಾರಿ ಸ್ವಾಮ್ಯದ ಏರ್ ಪೋರ್ಟ್ ಹಾಗೂ ರೈಲ್ವೆ ನಿಲ್ದಾಣಗಳ ಬಳಿ ಶಾಖೆಗಳನ್ನು ಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರಿ ಸ್ವಾಮ್ಯದ ಸ್ಥಳಗಲ್ಲಿ ಬೇರೆ ಸಂಘಟನೆಗಳು ಅನುಮತಿ ಪಡೆಯದೆ ಸಭೆ, ಸಮಾರಂಭಗಳನ್ನು ನಡೆಸಲು ಅನುಮತಿ ನೀಡುತ್ತಾರೆಯೇ ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ವಿಧಿವಶ

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…

1 hour ago

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

11 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

23 hours ago