ರಾಜ್ಯ

ಆರ್‌ಎಸ್‌‍ಎಸ್‌‍ನಿಂದ ಅಪಾಯವಿದೆಯೇ ಹೊರತು ಸಹಾಯವಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಐಕ್ಯತೆ ಏಕತೆಗೆ ವಿರುದ್ಧವಾಗಿರುವ ಆರ್‌ಎಸ್‌‍ಎಸ್‌‍ನ್ನು ಕಾಂಗ್ರೆಸ್‌‍ ನಿರಂತರವಾಗಿ ವಿರೋಧಿಸುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.‌

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ ಆರ್‌ಎಸ್‌‍ಎಸ್‌‍ನಿಂದ ದೂರ ಇರಬೇಕು. ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಜಿ಼ವಾದ, ಮನುವಾದಗಳನ್ನೇ ನರನಾಡಿ, ರಕ್ತಗಳಲ್ಲಿ ಪ್ರವಹಿಸಿಕೊಂಡಿರುವ ಆರ್‌ಎಸ್‌‍ಎಸ್‌‍ ಎಂಬ ಸಂಘಟನೆಯನ್ನು ಕಾಂಗ್ರೆಸ್‌‍ ಪಕ್ಷವು ಎಂದಿಗೂ ಶತ್ರುವಾಗಿಯೇ ನೋಡುತ್ತದೆ ಎಂದಿದ್ದಾರೆ.

ಏಕೆಂದರೆ, ಆರ್‌ಎಸ್‌‍ಎಸ್‌‍ ಸಂವಿಧಾನಕ್ಕೆ ಶತ್ರು, ಆರ್‌ಎಸ್‌‍ಎಸ್‌‍ ಐಕ್ಯತೆ, ಏಕತೆ, ಸಾರ್ವಭೌಮತೆಗೆ ವಿರುದ್ಧವಾಗಿದೆ. ಬಾಬಾ ಸಾಹೇಬರು, ಸರ್ದಾರ್‌ ಪಟೇಲರು ದಶಕಗಳ ಹಿಂದೆಯೇ ಆರ್‌ಎಸ್‌‍ಎಸ್‌‍ ಕುರಿತು ನಿಷ್ಠುರವಾಗಿ ಎಚ್ಚರಿಕೆಯ ಸಂದೇಶ ನೀಡಿ ಹೋಗಿದ್ದಾರೆ. ಆ ಮಹನೀಯರ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಮನುವಾದಿಗಳನ್ನು ದೂರ ಇಡಬೇಕಿದೆ ಎಂದಿದ್ದಾರೆ.

ಬ್ರಿಟಿಷರೊಂದಿಗೆ ಕೈಜೋಡಿಸಿ ಭಾರತ ವಿರೋಧಿಯಾಗಿ ನಡೆದುಕೊಂಡಿದ್ದ ಆರ್‌ಎಸ್‌‍ಎಸ್‌‍ ಸ್ವಾತಂತ್ರಾ ನಂತರ ಐಕ್ಯತೆಯ ವಿರೋಧಿ ಚಟುವಟಿಕೆಗಳನ್ನು ಇನ್ನಷ್ಟು ಹೆಚ್ಚಿಸಿತು. ಸಂಘ ಪರಿವಾರದ ಅಪಾಯವನ್ನು ಅಂದೇ ಊಹಿಸಿದ ಸರ್ದಾರ್‌ ಪಟೇಲರು ನಿಷೇಧ ಹೇರಿದ್ದರು ಎಂದು ವಿವರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

8 mins ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

18 mins ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

5 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

5 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

5 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

5 hours ago