ರಾಜ್ಯ

ಆರ್‌ಎಸ್‌‍ಎಸ್‌‍ನಿಂದ ಅಪಾಯವಿದೆಯೇ ಹೊರತು ಸಹಾಯವಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಐಕ್ಯತೆ ಏಕತೆಗೆ ವಿರುದ್ಧವಾಗಿರುವ ಆರ್‌ಎಸ್‌‍ಎಸ್‌‍ನ್ನು ಕಾಂಗ್ರೆಸ್‌‍ ನಿರಂತರವಾಗಿ ವಿರೋಧಿಸುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.‌

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ ಆರ್‌ಎಸ್‌‍ಎಸ್‌‍ನಿಂದ ದೂರ ಇರಬೇಕು. ಜನಾಂಗೀಯ ದ್ವೇಷ, ವರ್ಣಾಶ್ರಮದ ಕ್ರೌರ್ಯಗಳನ್ನು ಒಳಗೊಂಡ ನಾಜಿ಼ವಾದ, ಮನುವಾದಗಳನ್ನೇ ನರನಾಡಿ, ರಕ್ತಗಳಲ್ಲಿ ಪ್ರವಹಿಸಿಕೊಂಡಿರುವ ಆರ್‌ಎಸ್‌‍ಎಸ್‌‍ ಎಂಬ ಸಂಘಟನೆಯನ್ನು ಕಾಂಗ್ರೆಸ್‌‍ ಪಕ್ಷವು ಎಂದಿಗೂ ಶತ್ರುವಾಗಿಯೇ ನೋಡುತ್ತದೆ ಎಂದಿದ್ದಾರೆ.

ಏಕೆಂದರೆ, ಆರ್‌ಎಸ್‌‍ಎಸ್‌‍ ಸಂವಿಧಾನಕ್ಕೆ ಶತ್ರು, ಆರ್‌ಎಸ್‌‍ಎಸ್‌‍ ಐಕ್ಯತೆ, ಏಕತೆ, ಸಾರ್ವಭೌಮತೆಗೆ ವಿರುದ್ಧವಾಗಿದೆ. ಬಾಬಾ ಸಾಹೇಬರು, ಸರ್ದಾರ್‌ ಪಟೇಲರು ದಶಕಗಳ ಹಿಂದೆಯೇ ಆರ್‌ಎಸ್‌‍ಎಸ್‌‍ ಕುರಿತು ನಿಷ್ಠುರವಾಗಿ ಎಚ್ಚರಿಕೆಯ ಸಂದೇಶ ನೀಡಿ ಹೋಗಿದ್ದಾರೆ. ಆ ಮಹನೀಯರ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಮನುವಾದಿಗಳನ್ನು ದೂರ ಇಡಬೇಕಿದೆ ಎಂದಿದ್ದಾರೆ.

ಬ್ರಿಟಿಷರೊಂದಿಗೆ ಕೈಜೋಡಿಸಿ ಭಾರತ ವಿರೋಧಿಯಾಗಿ ನಡೆದುಕೊಂಡಿದ್ದ ಆರ್‌ಎಸ್‌‍ಎಸ್‌‍ ಸ್ವಾತಂತ್ರಾ ನಂತರ ಐಕ್ಯತೆಯ ವಿರೋಧಿ ಚಟುವಟಿಕೆಗಳನ್ನು ಇನ್ನಷ್ಟು ಹೆಚ್ಚಿಸಿತು. ಸಂಘ ಪರಿವಾರದ ಅಪಾಯವನ್ನು ಅಂದೇ ಊಹಿಸಿದ ಸರ್ದಾರ್‌ ಪಟೇಲರು ನಿಷೇಧ ಹೇರಿದ್ದರು ಎಂದು ವಿವರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

23 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

53 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

6 hours ago