ರಾಜ್ಯ

RSS ಪಥಸಂಚಲನ | ಅ.28ಕ್ಕೆ ಶಾಂತಿ ಸಭೆ ; 30ಕ್ಕೆ ನಿರ್ಧಾರ ತಿಳಿಸಿ ಎಂದ ಕೋರ್ಟ್‌

ಕಲಬುರಗಿ : ಇದೇ ನವೆಂಬರ್ 2ರಂದು ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್​ಎಸ್​​ಎಸ್​​ಗೆ ನಿರಾಸೆಯಾಗಿದೆ. ಆರ್​ಎಸ್​ಎಸ್​ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠ, ಸರ್ಕಾರಕ್ಕೆ ಕೆಲ ಸಲಹೆ ಸೂಚನೆಗಳನ್ನು ನೀಡಿ, ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿದೆ.

ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ಅಕ್ಟೋಬರ್ 30ರಂದು ವರದಿ ನೀಡುವಂತೆ ಕೋರ್ಟ್ ತಿಳಿಸಿದ್ದು, ಈ ವರದಿ ಆಧಾರದ ಮೇಲೆ ಕೋರ್ಟ್ ತೀರ್ಪು ನೀಡಲಿದೆ. ಇನ್ನು ನವೆಂಬರ್ 2ರಂದು ಪಥಸಂಚಲನಕ್ಕೆ ಕೋರ್ಟ್ ಇಂದು ಅನುಮತಿ ನೀಡುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದ ಆರ್​​ಎಸ್​​ಸ್​​ ಮುಖಂಡರಿಗೆ ಕೊಂಚ ನಿರಾಸೆಯಾಗಿದೆ.

ಸರ್ಕಾರದ ಪರ ವಾದ ಮಂಡಿಸಿದ ವಕೀಲ ಎಜಿ ಶಶಿಕಿರಣ್‌ ಶೆಟ್ಟಿ, ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ 2 ಅಭಿಪ್ರಾಯಗಳನ್ನು ನೀಡಿದ್ದಾರೆ. ಜನರಿಗೆ ತೊಂದರೆಯಾಗುವ ಬಗ್ಗೆ ಕಲಬುರಗಿ ಎಸ್‌ಪಿ ವರದಿ ನೀಡಿದ್ದಾರೆ. ಪಥಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಸಾಮಾನ್ಯವಾದ ನಂತರ ಪಥಸಂಚಲನ ಸೂಕ್ತ. ಕೆಲ ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತವೆಂದು ವರದಿಯಿದೆ. ಇದರಿಂದ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ವರದಿಯಿದೆ ಎಂದು ಮಂಡಿಸಿದರು.

ಇದನ್ನು ಓದಿ: ಆರ್‌ಎಸ್‌ಎಸ್‌ನಲ್ಲಿ ಸರ್ಕಾರಿ ನೌಕರರು ಭಾಗಿಯಾಗಲು ಅವಕಾಶವಿದೆ: ಸಂಸದ ಜಗದೀಶ್‌ ಶೆಟ್ಟರ್‌

ಕೋರ್ಟ್‌ ಅಕ್ಟೋಬರ್‌ 28 ರಂದು ಚಿತ್ತಾಪುರದಲ್ಲಿ ಶಾಂತಿ ಸಭೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಕೋರ್ಟ್ ಸೂಚನೆಯಂತೆ ಸರ್ಕಾರ ಅಕ್ಟೋಬರ್ 28ರಂದು ಸಭೆ ನಡೆಸಿ ಚಿತ್ತಾಪುರದಲ್ಲಿ ಸ್ಥಿತಿಗತಿ ಬಗ್ಗೆ ಅಕ್ಟೋಬರ್ 30ರೊಳಗೆ ವರದಿ ನೀಡಬೇಕಿದೆ. ಬಳಿಕ ಕೋರ್ಟ್, ಈ ವರದಿ ಆಧಾರದ ಮೇಲೆ ಆದೇಶ ನೀಡಲಿದೆ. ಹೀಗಾಗಿ ಸರ್ಕಾರ ವರದಿಯಲ್ಲಿ ಏನಂತ ನೀಡಲಿದೆ? ಕೋರ್ಟ್ ಯಾವ ತೀರ್ಪು ನೀಡಲಿದೆ ಎನ್ನುವ ಕುತೂಹಲ ಮೂಡಿಸಿದೆ.

ನವೆಂಬರ್ 2ರಂದು ಚಿತ್ತಾಪುರದಲ್ಲಿ ಆರ್​ಎಸ್​ಎಸ್​ ಪಥಸಂಚಲನ ಮಾಡಲು ಈಗಾಗಲೇ ಕೋರ್ಟ್ ಮುಂದೆ ಹೇಳಿದ್ದು, ಇದಕ್ಕೆ ಕೋರ್ಟ್ ಸಹ ಹೊಸ ಅರ್ಜಿ ಸಲ್ಲಿಸುವಂತೆ ಹೇಳಿತ್ತು. ಆದ್ರೆ. ಆರ್​​ಎಸ್​ಎಸ್​ ಜೊತೆಗೆ ಇನ್ನುಳಿದ ಏಳು ಬೇರೆ ಬೇರೆ ಸಂಘಟನೆಗಳು ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ಮಾಡಲು ಅನುಮತಿ ನೀಡುವಂತೆ ಕಲಬುರಗಿ ಜಿಲ್ಲಾಧಿಕಾರಿಗೆ ಮನವಿ ಮಾಡಿವೆ. ಹೀಗಾಗಿ ಯಾರಿಗೆ ಕೊಡಬೇಕೋ ಯಾರಿಗೆ ಬಿಡಬೇಕೆನ್ನುವುದೇ ದೊಡ್ಡ ಗೊಂದಲ ಏರ್ಪಟ್ಟಿದೆ.

ಕೊನೆಗೆ ಜಿಲ್ಲಾಡಳಿ ಏಳು ಸಂಘಟನೆಗಳು ಅರ್ಜಿ ಸಲ್ಲಿಸಿದ್ದು, ಹೀಗಾಗಿ ಸದ್ಯಕ್ಕೆ ಯಾವುದೇ ಸಂಘ-ಸಂಘಟನೆಗಳಿಗೆ ನವೆಂಬರ್ 2ರಂದು ಪಥಸಂಚಲನ ಮಾಡಲು ಅನುಮತಿ ನೀಡಬಾರದು ಎಂದು ವರದಿಯಲ್ಲಿ ತಿಳಿಸಿದೆ ಎಂದು ಸ್ವತಃ ಸರ್ಕಾರದ ಪರ ವಕೀಲರು ಕೋರ್ಟ್ ಮುಂದೆ ತಿಳಿಸಿದ್ದಾರೆ. ವಾದ-ವಿವಾದ ಆಲಿಸಿದ ಪೀಠ ವಿಚಾರಣೆಯನ್ನು ಅಕ್ಟೋಬರ್‌ 30 ಕ್ಕೆ ಮುಂದುಡಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

2 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

3 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

4 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

4 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

4 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

5 hours ago